fbpx
ಸಮಾಚಾರ

ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ – ಆಸ್ಪತ್ರೆಗೆ ದಾಖಲು

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘತವಾಗಿದ್ದು ಬೆಂಗಳೂರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬ್ಯಾಂಕ್ ಜನಾರ್ದನ್ ಅವರಿಗೆ ಹೃದಯಸಂಬಂಧಿ ಸಮಸ್ಯೆ ಇದ್ದು, ಮೂರನೇ ಬಾರಿಗೆ ಅವರಿಗೆ ಈ ರೀತಿ ಹೃದಯಾಘಾತವಾಗಿದೆ ಎಂದು ಹೇಳಲಾಗಿದೆ.

‘ಬ್ಯಾಂಕ್ ಜನಾರ್ದನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಆರೋಗ್ಯವಾಗಿದ್ದಾರೆ. ಸದ್ಯ ಅವರಿಗೆ ಆಂಜಿಯೋಗ್ರಾಮ್ ಮಾಡಲಾಗುತ್ತಿದೆ. ತಂದೆಯ ಆರೋಗ್ಯದ ಕುರಿತು ಬ್ಯಾಂಕ್ ಜನಾರ್ದನ್ ಪುತ್ರ ಗುರುಪ್ರಸಾದ್ ಮಾಹಿತಿ ನೀಡಿದ್ದಾರೆ.

80ರ ದಶಕದಲ್ಲಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಬ್ಯಾಂಕ್ ಜನಾರ್ಧನ್ಅವರು, ‘ಅಜಗಜಾಂತರ’, ‘ತರ್ಲೆ ನನ್ಮಗ’, ‘ಶ್‌’, ‘ರೂಪಾಯಿ ರಾಜ’, ‘ಚೆಲುವ’, ‘ಮೇಕ್‌ಅಪ್‌’, ‘ರಂಗ ಎಸ್‌ಎಸ್‌ಎಲ್‌ಸಿ’, ‘ಲಿಫ್ಟ್‌ ಕೊಡ್ಲಾ’ ಸೇರಿದಂತೆ ನೂರಾರು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top