fbpx
Karnataka

ಮಹದಾಯಿ ನದಿ ನೀರು ಹಂಚಿಕೆ ; ಕರ್ನಾಟಕಕ್ಕೆ ಮೇಲುಗೈ,

ಬೆಂಗಳೂರು: ಕರ್ನಾಟಕ ರಾಜ್ಯದ ಹುಬ್ಬಳ್ಳಿ ಭಾಗದ ಕುಡಿಯುವ ನೀರಿನ ಯೋಜನೆಯಾದ ಕಳಸಾ-ಭಂಡೂರಾ ಯೋಜನೆ ಬಗ್ಗೆ ನೆರೆಯ ಗೋವಾ ರಾಜ್ಯ ಎತ್ತಿದ್ದ ತಕರಾರು, ಕೊನೆಗೆ ಕೇಂದ್ರಸರ್ಕಾರ ನ್ಯಾಯಾಧಿಕರಣವೊಂದನ್ನು ರಚಿಸಲು ಕಾರಣವಾಗಿದೆ. ಒಂದು ಸರಿಯಾದ ರಾಷ್ಟ್ರೀಯ ಜಲನೀತಿಯಿಲ್ಲದೆ ಇಂಥಾ ಟ್ರಿಬ್ಯೂನಲ್ಗಳು ಎಷ್ಟು ಪರಿಣಾಮಕಾರಿಯಾಗಿವೆ ಎಂಬುದು ಪ್ರಶ್ನಾರ್ಹವಾಗಿದೆ. ಕನ್ನಡಿಗರ ಪಾಲಿಗಂತೂ ಟ್ರಿಬ್ಯೂನಲ್ಗಳೆಂದರೇನೇ ದುಸ್ವಪ್ನದ ಹಾಗೆ, ನಮ್ಮಿಂದ ನಮ್ಮ ಪಾಲನ್ನು ಕಿತ್ತುಕೊಳ್ಳಲೆಂದೇ ಇರುವ ಹಾಗೆ, ನಮ್ಮ ಯೋಜನೆಗಳನ್ನು ತಡೆದು ವಿಳಂಬ ಮಾಡಿಸುವ ಒಂದು ತಂತ್ರದ ಹಾಗೆ ಕಾಣ್ತಾಯಿದೆ ಅನ್ನುವ ಅನುಮಾನಕ್ಕೆ ಕಾರಣವಾಗಿತ್ತು. ಈದಿಗಾ ಗೋವಾ ಸರ್ಕಾರ ಕ್ಷಮೆಯಾಚಿಸಿ ಅಫಿಡವಿಟ್ ಅನ್ನು ವಾಪಸ್ ಪಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಕಳಸಾ ಬಂಡೂರಿ, ಮಹದಾಯಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಗೋವಾ ಸರ್ಕಾರ ಭಾರೀ ಹಿನ್ನಡೆ ಅನುಭವಿಸಿದ್ದು, ಕರ್ನಾಟಕ ಮೇಲುಗೈ ಸಾಧಿಸಿದೆ. ಗೋವಾ ಸರ್ಕಾರದ ಪರ ಸುಳ್ಳು ಸಾಕ್ಷಿ ಹೇಳಿ ಅಫಿಡವಿಟ್ ಸಲ್ಲಿಸಿದ್ದ ಜ್ಯೋತಿಪ್ರಕಾಶ್ ಅವರಿಗೆ ಮಹದಾಯಿ ನ್ಯಾಯಾಧೀಕರಣ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಬಳಿಕ ಗೋವಾ ಸರ್ಕಾರ ಕ್ಷಮೆಯಾಚಿಸಿ ಅಫಿಡವಿಟ್ ಅನ್ನು ವಾಪಸ್ ಪಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಮಹದಾಯಿ ನ್ಯಾಯಾಧೀಕರಣದಲ್ಲಿ ನಡೆದ ವಿಚಾರಣೆಯಲ್ಲಿ ಮುಂಬೈನ ಐಐಟಿ ಪ್ರಾಧ್ಯಾಪಕ ವಿ.ಜ್ಯೋತಿಪ್ರಕಾಶ್ ಅವರನ್ನು ತರಾಟೆಗೆ ತೆಗೆದುಕೊಂಡಿತ್ತು. ಮಹದಾಯಿ ಕಣಿವೆಯಲ್ಲಿ ನೀರಿನ ಹರಿವು 102 ಟಿಎಂಸಿ ಇದೆ ಎಂದು ಅಫಿಡವಿಟ್ ಕೊಟ್ಟಿದ್ದರು. ಈ ಅಂಕಿಅಂಶ ಸುಳ್ಳು ಎಂದು ನ್ಯಾಯಾಧೀಕರಣ ಅಸಮಾಧಾನವ್ಯಕ್ತಪಡಿಸಿದೆ.

ಇದು ಅತಿಯಾದ ಬೇಜವಾಬ್ದಾರಿ ವರ್ತನೆ. ನೀವು ಈ ಬಗ್ಗೆ ಕ್ಷಮೆ ಕೋರಿ, ಇಲ್ಲ ನಿಮ್ಮ ವಿರುದ್ಧ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ನ್ಯಾಯಾಧೀಕರಣ ಎಚ್ಚರಿಕೆ ನೀಡಿತು. ಕರ್ನಾಟಕದ ಪರ ಪಾಟಿ ಸವಾಲ್ ಆದ ಬಳಿಕ ನ್ಯಾಯಾಧೀಕರಣ ತರಾಟೆಗೆ ತೆಗೆದುಕೊಂಡಿತ್ತು.

ಕರ್ನಾಟಕ ರಾಜ್ಯದ ಹುಬ್ಬಳ್ಳಿ ಭಾಗದ ಕುಡಿಯುವ ನೀರಿನ ಯೋಜನೆಯಾದ ಕಳಸಾ-ಭಂಡೂರಾ ಯೋಜನೆ ಬಗ್ಗೆ ನೆರೆಯ ಗೋವಾ ರಾಜ್ಯ ಎತ್ತಿದ್ದ ತಕರಾರು, ಕೊನೆಗೆ ಕೇಂದ್ರಸರ್ಕಾರ ನ್ಯಾಯಾಧಿಕರಣವೊಂದನ್ನು ರಚಿಸಲು ಕಾರಣವಾಗಿದೆ. ಒಂದು ಸರಿಯಾದ ರಾಷ್ಟ್ರೀಯ ಜಲನೀತಿಯಿಲ್ಲದೆ ಇಂಥಾ ಟ್ರಿಬ್ಯೂನಲ್‍ಗಳು ಎಷ್ಟು ಪರಿಣಾಮಕಾರಿಯಾಗಿವೆ ಎಂಬುದು ಪ್ರಶ್ನಾರ್ಹವಾಗಿದೆ. ಕನ್ನಡಿಗರ ಪಾಲಿಗಂತೂ ಟ್ರಿಬ್ಯೂನಲ್‍ಗಳೆಂದರೇನೇ ದುಸ್ವಪ್ನದ ಹಾಗೆ, ನಮ್ಮಿಂದ ನಮ್ಮ ಪಾಲನ್ನು ಕಿತ್ತುಕೊಳ್ಳಲೆಂದೇ ಇರುವ ಹಾಗೆ, ನಮ್ಮ ಯೋಜನೆಗಳನ್ನು ತಡೆದು ವಿಳಂಬ ಮಾಡಿಸುವ ಒಂದು ತಂತ್ರದ ಹಾಗೆ ಕಾಣ್ತಾಯಿದೆ ಅನ್ನುವ ಅನುಮಾನಕ್ಕೆ ಕಾರಣವಾಗಿತ್ತು. ಈದಿಗಾ ಗೋವಾ ಸರ್ಕಾರ ಕ್ಷಮೆಯಾಚಿಸಿ ಅಫಿಡವಿಟ್ ಅನ್ನು ವಾಪಸ್ ಪಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top