ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು
ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು
ಮೆಟ್ಟಿದರೆ ಕನ್ನಡ ಮಣ್ಣ ಮೆಟ್ಟಬೇಕು
ಬದುಕಿದು ಜಟಕ ಬಂಡಿ,
ಇದು ವಿಧಿ ಓಡಿಸುವ ಬಂಡಿ
ಬದುಕಿದು ಜಟಕ ಬಂಡಿ
ಬದುಕಿದು ಜಟಕ ಬಂಡಿ
ವಿಧಿ ಅಲೆದಾಡಿಸುವ ಬಂಡಿ…
||ಹುಟ್ಟಿದರೇ ಕನ್ನಡ ನಾಡಲ್ಲಿ….||
ಕಾಶಿಲಿ ಸ್ನಾನ ಮಾಡು
ಕಾಶ್ಮೀರ ಸುತ್ತಿ ನೋಡು
ಜೋಗದ ಗುಂಡಿ ಒಡೆಯ ನಾನೆಂದು ಕೂಗಿ ಹಾಡು
ಅಜಂತ ಎಲ್ಲೋರವ ಬಾಳಲ್ಲಿ ಒಮ್ಮೆ ನೋಡು
ಬಾದಾಮಿ ಐಹೊಳೆಯ ಚೆಂದಾನ ತೂಕಮಾಡು
ಕಲಿಯೋಕೆ ಕೋಟಿ ಭಾಷೆ ಆಡೋಕ್ಕೆ ಒಂದೇ ಭಾಷೆ ….ಕನ್ನಡಾ..ಕನ್ನಡಾ..ಕಸ್ತೂರಿ ಕನ್ನಡಾ
||ಹುಟ್ಟಿದರೇ ಕನ್ನಡ ನಾಡಲ್ಲಿ….||
ಧ್ಯಾನಕ್ಕೆ ಭೂಮಿ ಇದು, ಪ್ರೇಮಕ್ಕೆ ಸ್ವರ್ಗ ಇದು
ಸ್ನೇಹಕ್ಕೆ ಶಾಲೆ ಇದು ,ಜ್ಞಾನಕ್ಕೆ ಪೀಠ ಇದು
ಕಾವ್ಯಕ್ಕೆ ಕಲ್ಪ ಇದು, ಶಿಲ್ಪಕ್ಕೆ ತಲ್ಪ ಇದು
ನಾಟ್ಯಕ್ಕೆ ನಾಡಿ ಇದು, ನಾದಾಂತರಂಗವಿದು
ಕುವೆಂಪು ಬೇಂದ್ರೆಯಿಂದ ಕಾರಂತ ಮಾಸ್ತಿಯಿಂದ
ಧನ್ಯವೀ ಕನ್ನಡ ….ಗೋಕಾಕಿನ ಕನ್ನಡಾ..
||ಹುಟ್ಟಿದರೇ ಕನ್ನಡ ನಾಡಲ್ಲಿ….||
ಬಾಳಿನ ಬೆನ್ನು ಹತ್ತಿ
ನೂರಾರು ಊರು ಸುತ್ತಿ
ಏನೇನೋ ಕಂಡ ಮೇಲೂ
ನಮ್ಮೂರೇ ನಮಗೆ ಮೇಲು
ಕೈಲಾಸಂ ಕಂಡ ನಮಗೆ ಕೈಲಾಸಂ ಯಾಕೆ ಬೇಕು?
ದಾಸರ ಕಂಡ ನಮಗೆ ವೈಕುಂಠ ಯಾಕೆ ಬೇಕು?
ಮುಂದಿನ ನನ್ನ ಜನ್ಮ ಬರೆದಿಟ್ಟನಂತೆ ಬ್ರಹ್ಮ
ಇಲ್ಲಿಯೇ….ಇಲ್ಲಿಯೇ…. ಈ ಮಣ್ಣಿನಲ್ಲಿಯೇ
ಎಂದಿಗೂ ನಾನಿಲ್ಲಿಯೇ…..
||ಹುಟ್ಟಿದರೇ ಕನ್ನಡ ನಾಡಲ್ಲಿ…. ||
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
