ತೆಲಂಗಾಣದಲ್ಲಿ ನಡೆದ ಪಶು ವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಇಡೀ ದೇಶವನ್ನೆ ಬೆಚ್ಚಿಬೀಳಿಸಿದೆ. ಪಶು ವೈದ್ಯೆ ಹತ್ಯೆ ವಿರುದ್ಧ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಜೊತೆಗೆ ದಕ್ಷಿಣ ಭಾರತೀಯ ಚಿತ್ರರಂಗದ ಕಲಾವಿದರು ಕೂಡ ಪ್ರಿಯಾಂಕಾ ರೆಡ್ಡಿ ಹತ್ಯೆ ವಿರದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಪಶುವೈದ್ಯೆಯ ಹತ್ಯೆಯ ವಿರುದ್ಧ ನಟಿ ಅನುಷ್ಕಾ ಶೆಟ್ಟಿ ಸೇರಿದಂತೆ ದಕ್ಷಿಣ ಭಾರತದ ಕಲಾವಿದರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಈ ಘಟನೆಯನ್ನು ಖಂಡಿಸಿ ಸಿನಿ ತಾರೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂತೆಯೇ ನಟ ಜಗ್ಗೇಶ್ ಕೂಡ ಈ ಕುರಿತಂತೆ ಟ್ವೀಟ್ ಮಾಡಿದ್ದು, ಎಂದು ನಮ್ಮ ದೇಶದಲ್ಲಿ ಇಂಥ ಹೇಯಕೃತ್ಯದ ರಾಕ್ಷಸರಿಗೆ ಸಾರ್ವಜನಿಕವಾಗಿ ಗಲ್ಲು ಶಿಕ್ಷೆ ಬರುತ್ತದೋ ಅಲ್ಲಿಯವರೆಗು ಇಂಥ ಕೃತ್ಯ ತಡೆಯಲಾಗದು! “ಹೆಣ್ಣು ಕುಲವೆ ಸಾರ್ವಜನಿಕವಾಗಿ ಒಬ್ಬಂಟಿ ಪ್ರಯಾಣ ಕ್ಷೇಮವಲ್ಲಾ ಕಂದಮ್ಮಗಳೆ ಎಚ್ಚರ” ಸಾಧ್ಯವಾದಷ್ಟು ನಿರ್ಜನ ಪ್ರದೇಶದಲ್ಲಿ ಒಂಟಿ ಸಂಚಾರ ಮಾಡದಿರಿ! ನಿಮ್ಮ ರಕ್ಷಣೆಗೆ ಆಧುನಿಕ ಅವಿಷ್ಕಾರ ಬಳಸಿ!ಹರಿಓಂ. ಎಂದು ಟ್ವೀಟ್ ಮಾಡಿದ್ದಾರೆ.
ಎಂದು ನಮ್ಮ ದೇಶದಲ್ಲಿ ಇಂಥ ಹೇಯಕೃತ್ಯದ ರಾಕ್ಷಸರಿಗೆ ಸಾರ್ವಜನಿಕವಾಗಿ ಗಲ್ಲು ಶಿಕ್ಷೆ
ಬರುತ್ತದೋ ಅಲ್ಲಿಯವರೆಗು ಇಂಥ ಕೃತ್ಯ ತಡೆಯಲಾಗದು!
"ಹೆಣ್ಣು ಕುಲವೆ ಸಾರ್ವಜನಿಕವಾಗಿ ಒಬ್ಬಂಟಿ ಪ್ರಯಾಣ ಕ್ಷೇಮವಲ್ಲಾ ಕಂದಮ್ಮಗಳೆ ಎಚ್ಚರ"
ಸಾಧ್ಯವಾದಷ್ಟು ನಿರ್ಜನ ಪ್ರದೇಶದಲ್ಲಿ ಒಂಟಿ ಸಂಚಾರ
ಮಾಡದಿರಿ!
ನಿಮ್ಮ ರಕ್ಷಣೆಗೆ ಆಧುನಿಕ ಅವಿಷ್ಕಾರ ಬಳಸಿ!ಹರಿಓಂ. https://t.co/jCp2iAAsWa— ನವರಸನಾಯಕ ಜಗ್ಗೇಶ್ (@Jaggesh2) November 30, 2019
ನಡೆದ ಘಟನೆಯೇನು?:
ಪಶುವೈದ್ಯೆಯಾಗಿ ಕೆಲಸ ಮಾಡುತ್ತಿದ್ದ 26 ವರ್ಷದ ಪ್ರಿಯಾಂಕಾ ರೆಡ್ಡಿ ಮೊನ್ನೆ ಬುಧವಾರ ರಾತ್ರಿಪಾಳಿಯಲ್ಲಿ ಕೆಲಸ ಮಾಡಲು ತಮ್ಮ ಮನೆಯಿಂದ ಸ್ಕೂಟರ್ ನಲ್ಲಿ ಕಚೇರಿಗೆ ಹೋಗುತ್ತಿದ್ದರು. ಮಾರ್ಗ ಮಧ್ಯೆ ಸ್ಕೂಟರ್ ನ ಟೈರ್ ಪಂಕ್ಚರ್ ಆಗಿತ್ತು.
ಆಗ ರಾತ್ರಿ 9.15ರ ಹೊತ್ತು, ಗಾಡಿ ಕೆಟ್ಟು ಹೋಗಿದೆ ಎಂದು ತನ್ನ ಸೋದರಿಗೆ ಕರೆ ಮಾಡಿದ್ದರು. ಆಗ ಗಾಡಿ ಅಲ್ಲೇ ಬಿಟ್ಟು ಮನೆಗೆ ಬಾ ಎಂದಿದ್ದರಂತೆ, ನಂತರ ಕೆಲ ಅಪರಿಚಿತ ವ್ಯಕ್ತಿಗಳು ಸಹಾಯಕ್ಕೆ ಬಂದಿದ್ದಾರೆ ಎಂದು ಪ್ರಿಯಾಂಕಾ ಭವ್ಯರಿಗೆ ಫೋನ್ ನಲ್ಲಿ ಹೇಳಿ ಕಟ್ ಮಾಡಿದ್ದರು.
ನಂತರ ನಿನ್ನೆ ಬೆಳಗ್ಗೆ ಪ್ರಿಯಾಂಕಾ ಮನೆಯವರಿಗೆ ಸಿಕ್ಕಿದ್ದು ಶವವಾಗಿ. ಆರೋಪಿಗಳು ದೇಹವನ್ನು ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದರು. ವೈದ್ಯೆಯ ದೇಹದಲ್ಲಿದ್ದ ಲಾಕೆಟ್ ನಿಂದ ಗುರುತು ಪತ್ತೆಯಾಗಿದೆ. ಹತ್ಯೆಗೆ ಮುನ್ನ ಅಪಹರಣ ಮಾಡಿ ಸಾಮೂಹಿಕ ಅತ್ಯಾಚಾರ ನಡೆಸಿದ್ದರು ದುಷ್ಕರ್ಮಿಗಳು ಎಂದು ಪೊಲೀಸರು ಹೇಳಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ. ಮಹಬೂಬನಗರದ ನಾರಾಯಣಪೇಟೆಯ ಲಾರಿ ಚಾಲಕ ಮೊಹಮ್ಮದ್ ಪಾಶಾ, ಗುಡಿಗಂಡ್ಲಾದ ನವೀನ್, ಲಾರಿ ಕ್ಲೀನರ್ ಕೇಶವುಲು ಮತ್ತೊಬ್ಬ ಕ್ಲೀನರ್ ಶಿವ ಎಂಬುವವರನ್ನು ಬಂಧಿಸಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
