ಮಜಾಭಾರತ ಕಾಮಿಡಿ ಶೋ ಹಾಸ್ಯ ಕಲಾವಿದ ಕಾಳಸಿದ್ದನಹುಂಡಿಯ ರವಿ ಅವರು, ಸಣ್ಣ-ಪುಟ್ಟ ಸೀರಿಯಲ್ಗಳಲ್ಲಿ ನಟಿಸುತ್ತಿದ್ದರು. ಅವರು 4 ವರ್ಷದ ಹಿಂದೆ ಮೈಸೂರು ಮೂಲದ ಬೇಬಿ ಎಂಬಾಕೆಯನ್ನು ಪ್ರೀತಿಸಿ, ಮನೆಯವರ ವಿರೋಧವಿದ್ದರೂ ಮದುವೆಯಾಗಿದ್ದರು. ಆ ಬಳಿಕ ಕೊರೊನಾ ಕಷ್ಟಕಾಲದಲ್ಲಿ ರವಿ ಅವರಿಗೆ ಎಲ್ಲಿಯೂ ಸಹ ಅವಕಾಶಗಳು ಸಿಗದೆ ಕಷ್ಟದ ಜೀವನ ನಡೆಸುತ್ತಿದ್ದರು
ಈ ಹಿನ್ನೆಲೆ ಪತ್ನಿ ಬೇಬಿ ಮತ್ತೊಬ್ಬನ ಜೊತೆ ಅಕ್ರಮ ಸಂಬಂಧವನ್ನು ಇಟ್ಟುಕೊಂಡಿದ್ದರು. ಇದು ರವಿ ಅವರಿಗೆ ತಿಳಿದು ಪ್ರಶ್ನಿಸಿದ್ದಾರೆ. ಬಳಿಕ ನಿನ್ನ ಬಳಿ ದುಡ್ಡಿಲ್ಲ ಎಂದು ಬೇಬಿ ಕಾರಣ ಕೊಟ್ಟು ರವಿ ಅವರನ್ನು ಬಿಟ್ಟು ಹೋಗಿದ್ದಾರೆ. ಅಲ್ಲದೇ ದೂರವಾದ ಬಳಿಕ ಮತ್ತೊಂದು ಮದುವೆಯನ್ನು ಮಾಡಿಕೊಂಡಿದ್ದಾರೆ.
ಇದನ್ನು ತಡೆಯಲು ಹೋಗಿದ್ದ ರವಿ ಮೇಲೆ ಬೇಬಿ ಅವರ ಎರಡನೇ ಗಂಡ ಹಾಗೂ ಆಕೆ ತಮ್ಮನಿಂದ ಹಲ್ಲೆ ನಡೆದಿದ್ದು, ಈ ಕುರಿತು ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.. ತನಗಾದ ಮೋಸದಂತೆ ಮತ್ಯಾರಿಗೂ ಆಗಬಾರದು, ಆಕೆಗೆ ಶಿಕ್ಷೆ ಆಗಬೇಕು ಎಂದು ಕಲಾವಿದ ರವಿ ಪಟ್ಟು ಹಿಡಿದಿದ್ದು, ನ್ಯಾಯಕ್ಕಾಗಿ ಕೋರ್ಟ್ ಮೊರೆ ಹೋಗಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
