ರಾಜ್ಯದ ಜನತೆಯ ನಿದ್ದೆಗೆಡೆಸಿದ್ದ ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸುವಲ್ಲಿ ಕರ್ನಾಟಕ ಪೋಲಿಸರು ಯಶಸ್ವಿಯಾಗಿದ್ದಾರೆ. ಪೋಲಿಸರ ಈ ಸಾಧನೆಗೆ ಸ್ಯಾಂಡಲ್ ವುಡ್ ನ ನವರಸನಾಯಕ ಜಗ್ಗೇಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಶನಿವಾರ ಸಂಜೆ ಟ್ವೀಟ್ ಮಾಡಿರುವ ಅವರು, ‘ಕಾಲೇಜು ವಿಧ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ ಕಾಮಪಿಪಾಸುಗಳನ್ನು ಬಂಧಿಸಿದ ಕರುನಾಡಿನ ಹೆಮ್ಮೆಯ ಆರಕ್ಷಕರಿಗೆ ನನ್ನ ಅಭಿನಂದನೆಗಳು’ ಎಂದು ತಿಳಿಸಿದ್ದಾರೆ.
‘ನಮ್ಮ ರಾಜ್ಯದ ಪೊಲೀಸರ ಬಗ್ಗೆ ನನಗೆ ಹೆಮ್ಮೆ ಇದೆ. ನನ್ನ ಕಡೆಯಿಂದ ಪ್ರಕರಣ ಭೇದಿಸಿರುವ ನಲ್ಮೆಯ ಪೊಲೀಸರಿಗೆ ₹1 ಲಕ್ಷ ಬಹುಮಾನ ನೀಡಲಿದ್ದೇನೆ. ನಿಮ್ಮ ಸಾರ್ಥಕ ಸೇವೆ ಹೀಗೆ ಮುಂದುವರಿಯಲಿ. ರಾಷ್ಟ್ರಕ್ಕೆ ಮಾದರಿ ನಮ್ಮ ಪೊಲೀಸ್’ ಎಂದು ನವರಸ ನಾಯಕ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
