fbpx
ಸಮಾಚಾರ

ರಾಜ್ಯದಲ್ಲಿಂದು 851 ಹೊಸ ಕೊರೊನಾ ಕೇಸ್

ರಾಜ್ಯದಲ್ಲಿ ಇಂದು 790 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಮಹಾಮಾರಿ 15 ಜನರನ್ನು ಬಲಿ ಪಡೆದಿದ್ದು, 790 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,56,988 ಕ್ಕೆ ಏರಿಕೆಯಾಗಿದ್ದು, ಆ ಪೈಕಿ 37,441 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಇದುವರೆಗೆ 29,02,089 ಮಂದಿ ಗುಣಮುಖರಾಗಿದ್ದು, ಸದ್ಯ ರಾಜ್ಯದಲ್ಲಿ 17,432 ಸಕ್ರಿಯ ಪ್ರಕರಣಗಳಿವೆ.

ಇಂದು ಬೆಂಗಳೂರಿನಲ್ಲಿ 248 ಹೊಸ ಪ್ರಕರಣಗಳು ವರದಿಯಾಗಿದ್ದು, 3 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ದಕ್ಷಿಣ ಕನ್ನಡ 227, ಉಡುಪಿ 74, ಮೈಸೂರು 53, ಚಿಕ್ಕಮಗಳೂರು 49, ತುಮಕೂರು ಜಿಲ್ಲೆಯಲ್ಲಿ 44 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಒಟ್ಟು 1,18,791 ಸ್ಯಾಂಪಲ್ (ಆರ್ ಟಿ ಪಿಸಿಆರ್ 81,391 + 37,400 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 248 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 3 ಜನ ಮರಣ ಹೊಂದಿದ್ದಾರೆ. 362 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top