ರಾಯಲ್ ಚಾಲೆಂಜರ್ ಬೆಂಗಳೂರು ತಂಡದಲ್ಲಿ ಆಡುತ್ತಿರುವ ಏಕೈಕ ಕನ್ನಡಿಗ ಯುವ ಆಟಗಾರ ದೇವದತ್ ಪಡಿಕ್ಕಲ್ ತಮ್ಮ ಮನೋಜ್ಞ ಆಟದ ಮೂಲಕ ಕ್ರಿಕೆಟ್ ಪ್ರಿಯರ ಗಮನ ಸೆಳೆದಿದ್ದಾರೆ. ಇದೀಗ ಕನ್ನಡಾಭಿಮಾನವನ್ನು ಮೆರೆಯುವ ಮೂಲಕ ದೇವದತ್ ಕನ್ನಡಿಗರ ಮನಗೆದಿದ್ದಾರೆ.
Bold Diaries: Devdutt Padikkal’s Kannada Chat
🎙️ @devdpd07 : "ನಾವು ಕನ್ನಡಿಗರೆಲ್ಲ, ಭಾರತಕ್ಕಾಗಿ ಆಡುವಾಗಲೂ ಕನ್ನಡದಲ್ಲಿಯೇ ಮಾತಾಡೋದು – ಗೌತಮ್ ಇರಲಿ ರಾಹುಲ್ ಸಾರ್ ಇರಲಿ, ನಾವೆಲ್ಲರೂ ಕನ್ನಡದಲ್ಲಿಯೇ ಮಾತನಾಡುತ್ತೇವೆ."#PlayBold #WeAreChallengers #ನಮ್ಮRCB #IPL2021 pic.twitter.com/8GFQOvnPzB
— Royal Challengers Bangalore (@RCBTweets) September 26, 2021
ಆರ್ಸಿಬಿ ತಂಡವು ಬಿಡುಗಡೆ ಮಾಡಿರುವ ವಿಡಿಯೊದಲ್ಲಿ ಪಡಿಕ್ಕಲ್ ತಮ್ಮ ಕ್ರಿಕೆಟ್ ಜೀವನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ‘ನಾವು ಕನ್ನಡಿಗರೆಲ್ಲ, ಭಾರತಕ್ಕಾಗಿ ಆಡುವಾಗಲೂ ಕನ್ನಡದಲ್ಲಿಯೇ ಮಾತಾಡೋದು, ಗೌತಮ್ ಇರಲಿ, ರಾಹುಲ್ ಸರ್ ಇರಲಿ, ನಾವೆಲ್ಲರೂ ಕನ್ನಡದಲ್ಲಿಯೇ ಮಾತನಾಡುತ್ತೇವೆ. ಬೇರೆ ರಾಜ್ಯದ ಆಟಗಾರರೊಂದಿಗೆ ಆಂಗ್ಲ ಹಾಗೂ ಹಿಂದಿ ಭಾಷೆಯಲ್ಲಿ ಮಾತನಾಡುತ್ತೇವೆ. ಕನ್ನಡಿಗರೆಲ್ಲ ಕನ್ನಡದಲ್ಲೇ ಮಾತಾಡೋದು’ ಎಂದು ವಿವರಿಸಿದರು.
ಇನ್ನು ವಿಡಿಯೋದಲ್ಲಿ ತನ್ನ ಕ್ರಿಕೆಟ್(Cricket) ವೃತ್ತಿ ಬದುಕಿನ ಬಗ್ಗೆ ಮಾತನಾಡಿದ ದೇವದತ್ ಪಡಿಕ್ಕಲ್ ತಾನು ಈ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದು ಹೇಗೆ? ಕುಟುಂಬ ಕೊಟ್ಟ ಸಹಕಾರ ಹೀಗೆ ಎಲ್ಲಾ ವಿಚಾರವನ್ನೂ ಕನ್ನಡದಲ್ಲೇ ವಿವರಿಸಿದ್ದಾರೆ. ತನ್ನ ಕುಟುಂಬ ತನ್ನ ಕ್ರಿಕೆಟ್ ವೃತ್ತಿ ಬದುಕಿಗೆ ಸಪೋರ್ಟ್ ಮಾಡಲೆಂದೇ ಬೆಂಗಳೂರಿಗೆ ಶಿಫ್ಟ್ ಆಗಿದೆ ಎಂದೂ ಈ ವೆಳೆ ಉಲ್ಲೇಖಿಸಿದ್ದಾರೆ.
‘ಕ್ರಿಕೆಟ್ ಆಡುವುದಕ್ಕಾಗಿಯೇ ಬೆಂಗಳೂರಿಗೆ ಸ್ಥಳಾಂತರವಾಗಿರುವುದಾಗಿ ತಿಳಿಸಿದ್ದಾರೆ. ನಮ್ಮ ಕುಟುಂಬದಲ್ಲಿ ಅದೊಂದು ಮಹತ್ತರವಾದ ತೀರ್ಮಾನವಾಗಿತ್ತು. ನನಗೆ ಬೆಂಬಲ ನೀಡಲು ಹೆತ್ತವರು ಧೈರ್ಯ ತೋರಿದ್ದಾರೆ. ಹೈದರಾಬಾದ್ನಿಂದ ಬೆಂಗಳೂರಿಗೆ ಶಿಫ್ಟ್ ಆಗಿದ್ದೇವೆ. ಅದಕ್ಕಾಗಿ ಹೆತ್ತವರಿಗೆ ಋಣಿಯಾಗಿದ್ದೇನೆ’ ಎಂದು ಹೇಳಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
