ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾವಿರುದ್ಧ ನಟಿ ಶ್ರುತಿ ಹರಿಹರನ್ ಅವರು ಈ ಹಿಂದೆ ದೌರ್ಜನ್ಯ ಆರೋಪ ಮಾಡಿದ್ದರು. ಈ ಸಂಬಂಧ 2018ರಲ್ಲಿ ಅರ್ಜುನ್ ಸರ್ಜಾ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕೇಸ್ ದಾಖಲಾಗಿ ಮೂರು ವರ್ಷ ಕಳೆದರೂ ನಟ ಅರ್ಜುನ್ ಸರ್ಜಾ ವಿರುದ್ಧ ಸೂಕ್ತ ಸಾಕ್ಷಿ ಸಿಕ್ಕಿಲ್ಲ. ಆ ಕಾರಣದಿಂದ ಕಬ್ಬನ್ ಪಾರ್ಕ್ ಪೊಲೀಸರು ಬಿ ರಿಪೋರ್ಟ್ ಸಿದ್ಧಪಡಿಸಲು ನಿರ್ಧರಿಸಿದ್ದಾರೆ.
ಪ್ರಕರಣಕ್ಕೆ ಸಂಭಂದಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸರು ಶ್ರುತಿ ಹರಿಹರನ್ಗೆ ನೋಟಿಸ್ ನೀಡುವ ಮೂಲಕ ವಿಚಾರಣೆಯಲ್ಲಿ ಭಾಗಿಯಾಗುವಂತೆ ತಿಳಿಸಿದ್ದರು. ನೋಟಿಸ್ ನೀಡಿ ಮೂರು ದಿನಗಳಲ್ಲಿ ವಿಚಾರಣೆಗೆ ಬಾರದಿದ್ದರೆ, ಯಾವುದೇ ಸಾಕ್ಷಿ ಇಲ್ಲವೆಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಬಿ ರಿಪೋರ್ಟ್ ಸಲ್ಲಿಸುವುದಾಗಿಯೂ ಹೇಳಿದ್ದರು. ಮೂರು ದಿನ ಕಳಿದರೂ ಶ್ರುತಿ ವಿಚಾರಣೆಯಲ್ಲಿ ಭಾಗಿಯಾಗಿರಲಿಲ್ಲ ಹೀಗಾಗಿ ಕಬ್ಬನ್ ಪಾರ್ಕ್ ಪೊಲೀಸರು ಬಿ-ರಿಪೋರ್ಸ್ ಸಲ್ಲಿಸಿದ್ದಾರೆ. ಈ ಮೂಲಕ ಅರ್ಜುನ್ ಯಾವುದೇ ತಪ್ಪು ಮಾಡಿಲ್ಲ, ಶ್ರುತಿ ಬಳಿ ಸಾಕ್ಷಿ ಇಲ್ಲ ಎಂಬುದು ಸಾಬೀತಾಗಿದೆ. ಬಿ-ರಿಪೋರ್ಟ್ ಸಲ್ಲಿಸುವುದೆಂದರೆ ಆರೋಪಿ ಯಾವುದೇ ತಪ್ಪು ಮಾಡಿಲ್ಲ ಎಂದರ್ಥ.
ಮೇಘನಾರಾಜ್ ಹೇಳಿದ್ದೇನು?
ಈ ಪ್ರಕರಣ ಸುದ್ದಿಯಾಗ್ತಿದಂತೆ ಸೋಷಿಯಲ್ವ ಮೀಡಿಯಾದಲ್ಲಿ ಪರೋಕ್ಷವಾಗಿ ಧ್ರುವ ಸರ್ಜಾ ಹಾಗೂ ಮೇಘನಾ ರಾಜ್ ಪ್ರತಿಕ್ರಿಯಿಸಿದ್ದಾರೆ. ಅರ್ಜುನ್ ಸರ್ಜಾ ಯಾವಾಗಲೂ ಜಂಟಲ್ ಮ್ಯಾನ್ ಅಂತ ಮೇಘನಾ ರಾಜ್ ಪೋಸ್ಟ್ ಹಾಕಿದ್ದಾರೆ.
‘ಧರ್ಮೋ ರಕ್ಷತಿ ರಕ್ಷಿತಃ’ ಎಂದ ಧ್ರುವ!
ಈ ವಿಚಾರ ತಿಳಿಯುತ್ತಿದ್ದಂತೆ ‘ಧರ್ಮೋ ರಕ್ಷತಿ ರಕ್ಷಿತಃ’ ಎಂದು ಧ್ರುವ ಸರ್ಜಾ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಮತ್ತೊಂದು ವಿಡಿಯೋವೊಂದನ್ನು ಧ್ರುವ ಸರ್ಜಾ ಶೇರ್ ಮಾಡಿದ್ದಾರೆ. ಸೊಳ್ಳೆ ಬ್ಯಾಟ್ನಿಂದ ಕೀಟಗಳನ್ನು ಸಾಯಿಸುತ್ತಿರುವ ದೃಶ್ಯ ಅದರಲ್ಲಿದ್ದು, ‘ಸೊಳ್ಳೆ ಕ್ರಿಮಿ ಕೀಟ’ ಎಂದು ಕ್ಯಾಪ್ಷನ್ ನೀಡಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
