ಬಿಗ್ ಬಾಸ್ ಕನ್ನಡ ಸೀಸನ್ 8 ರ ಟಾಪ್ 3 ಸ್ಪರ್ದಿಯಾಗಿ ಗಮನ ಸೆಳೆದಿದ್ದ ಕರಾವಳಿ ಚೆಲುವೆ ದಿವ್ಯಾ ಉರುಡುಗ ಬಿಗ್ ಬಾಸ್ ಮುಗಿದ ಮೇಲೆ ಹೆಚ್ಚು ಸುದ್ದಿಯಾಗಿರಲಿಲ್ಲ. ಯಾವುದೇ ಷೋ, ಸಿನಿಮಾದಲ್ಲಿಯೂ ದಿವ್ಯಾ ಕಾಣಿಸಿರಲಿಲ್ಲ. ದಿವ್ಯಾ ಎಲ್ಲಿ ಕಾಣೆಯಾಗಿದ್ದಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳನ್ನ ಕಾಡುತ್ತಿತ್ತು. ಈ ಆ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ.
ನಿರ್ದೇಶಕ ಯೋಗರಾಜ್ ಭಟ್ ಅವರ ಸಿನಿಮಾದಲ್ಲಿ ನಟಿಸೋ ಅವಕಾಶವನ್ನು ಅವರು ಗಿಟ್ಟಿಸಿಕೊಂಡಿದ್ದಾರೆ. ಈ ವಿಚಾರ ಕೇಳಿ ದಿವ್ಯಾ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಯೋಗರಾಜ್ ಸಿನಿಮಾಸ್ ಹಾಗೂ ರವಿ ಶಾಮನೂರ್ ಫಿಲ್ಮ್ಸ್ ಜಂಟಿ ನಿರ್ಮಾಣದಲ್ಲಿ ‘ಪದವಿಪೂರ್ವ’ ಸಿನಿಮಾ ಮೂಡಿ ಬರುತ್ತಿದೆ. ಹರಿಪ್ರಸಾದ್ ಜಯಣ್ಣ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾಗೆ ಬಿಗ್ ಬಾಸ್ ಖ್ಯಾತಿಯ ನಟಿ ದಿವ್ಯಾ ಉರುಡುಗ ಪ್ರವೇಶ ಪಡೆದುಕೊಂಡಿದ್ದಾರೆ.
ಚಿತ್ರದಲ್ಲಿ ದಿವ್ಯಾ ಉರುದುಗ ಅತಿಥಿ ಪಾತ್ರವೊಂದನ್ನು ನಿರ್ವಹಿಸುತ್ತಿದ್ದಾರೆ. ಯೋಗರಾಜ್ ಭಟ್ ಅವರ ಪ್ರೊಡಕ್ಷನ್ ಹೌಸ್ ಅಡಿಯಲ್ಲಿ ಕೆಲಸ ಮಾಡುತ್ತಿರುವುದಕ್ಕೆ ದಿವ್ಯಾ ಖುಷಿ ಪಟ್ಟಿದ್ದಾರೆ. ದಿವ್ಯಾ ಅವರು ನಟಿಸಲಿರುವ ಕಥೆಯ ಚಿತ್ರೀಕರಣ ಬೆಂಗಳೂರು ಹಾಗು ಮಂಗಳೂರಿನ ಸುತ್ತಮುತ್ತ ನಡೆಯಲಿದೆ. ಈಗಾಗಲೇ ನಾಲ್ಕು ಹಂತದಲ್ಲಿ ಶೂಟಿಂಗ್ ಮುಗಿದಿದ್ದು, ಐದನೇ ಹಂತದ ಚಿತ್ರೀಕರಣಕ್ಕೆ ತಂಡ ಸಕಲ ಸಿದ್ಧತೆ ನಡೆಸಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
