ಮಂಡ್ಯಾ ಸಂಸದೆ ನಟಿ ಸುಮಲತಾ ಅಂಬರೀಷ್ ಅವರ ಸಹೋದರಿ ರೇಣುಕಾ ಅವರಿಗೆ ವಂಚನೆ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಎಚ್ಡಿಎಫ್ ಸಿ ಬ್ಯಾಂಕ್ ಮ್ಯಾನೇಜರ್ ಆಗಿದ್ದ ವಿಶಾಲಾಕ್ಷಿ ಎಂಬವರು ವಂಚನೆ ಮಾಡಿದ್ದು, ಇವರ ವಿರುದ್ಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಡಿಎಫ್ಸಿ ಬ್ಯಾಂಕ್ ಮ್ಯಾನೇಜರ್ ಆಗಿದ್ದ ವಿಶಾಕ್ಷಿಭಟ್ ಎಂಬಾಕೆ ಬ್ಯಾಂಕ್ನಲ್ಲಿ ರೇಣುಕಾರಿಂದ 60 ಲಕ್ಷ ಹಣ ಹೂಡಿಕೆ ಮಾಡಿಸಿ ವಂಚಿಸಿದ್ದಾರೆ ಎಂದು 2015ರಲ್ಲಿ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. 60 ಲಕ್ಷ ರೂ. ಹೂಡಿಕೆ ಮಾಡಿಸಿಕೊಂಡು ವಂಚನೆ ಮಾಡಿರುವ ಸಂಬಂಧ ಪ್ರಕರಣ ನ್ಯಾಯಾಲಯದಲ್ಲಿದೆ.
ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿ ಇರುವಾಗಲೇ ರೇಣುಕಾರ ಮನೆಗೆ ನುಗ್ಗಿದ ಆರೋಪಿತೆ ವಿಶಾಲಾಕ್ಷಿ ಭಟ್, ಖಾಲಿ ಪೇಪರ್ಗೆ ಸಹಿ ಹಾಕುವಂತೆ ಧಮ್ಕಿ ಹಾಕಿದ್ದಾರೆ ನ್ನಲಾಗಿದೆ. ಇದರಿಂದ ಬೇಸತ್ತ ರೇಣುಕಾ, ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ವಿಶಾಲಾಕ್ಷಿ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ಸಂಬಂಧ ವಿಶಾಲಾಕ್ಷಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
