ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ರಕ್ಷಣಾಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸೇರಿ 13 ಮಂದಿ ಈಗಾಗಲೇ ನಿಧನರಾಗಿದ್ದಾರೆ. ವರುಣ್ ಸಿಂಗ್ ಮಾತ್ರ ದುರಂತದಲ್ಲಿ ಬದುಕುಳಿದು ಸಾವು-ಬದುಕಿನೊಂದಿಗೆ ಹೋರಾಡುತ್ತಿದ್ದರು. ಗಂಭೀರ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಸೇನಾಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್.
ಶೌರ್ಯಚಕ್ರ ಪ್ರಶಸ್ತಿ ಪುರಸ್ಕೃತರಾಗಿದ್ದ ವರುಣ್ ಸಿಂಗ್ ಅವರು ಉತ್ತರ ಪ್ರದೇಶದ ಕನ್ಹೊಲಿಯಲ್ಲಿ 1982ರಲ್ಲಿ ಜನಿಸಿದ್ದರು. ಬಾಲ್ಯದಿಂದಲೇ ವಿಮಾನಯಾನದಲ್ಲಿ ಬಹಳ ಆಸಕ್ತಿ ಹೊಂದಿದ್ದ ಅವರು, ಏರೋನಾಟಿಕಲ್ ಸೊಸೈಟಿ ಆಫ್ ಇಂಡಿಯಾ ಆಯೋಜಿಸಿದ್ದ ರಸಪ್ರಶ್ನೆಗಳಲ್ಲಿ ಎರಡು ಬಾರಿ ತಮ್ಮ ಶಾಲೆಯನ್ನು ಪ್ರತಿನಿಧಿಸಿದ್ದರು. ಅವರು ಒಡಿಶಾದಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದ್ದರು. ಬಳಿಕ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯಲ್ಲಿ ಮೊದಲ ಪ್ರಯತ್ನದಲ್ಲಿಯೇ ತೇರ್ಗಡೆ ಹೊಂದಿದ್ದರು.
ಹೀಗಾಗಿ ಬಿಪಿನ್ ರಾವತ್ ಬಲಿ ಪಡೆದ ಹೆಲಿಕಾಪ್ಟರ್ ದುರಂತದಲ್ಲಿದ್ದ ಎಲ್ಲಾ 14 ಮಂದಿಯೂ ಸಾವನ್ನಪ್ಪಿದ್ದಾರೆ. ವರುಣ್ ಅವರು ಶೇ.45ರಷ್ಟು ಸುಟ್ಟ ಗಾಯದಿಂದ ಬಳಲುತ್ತಿದ್ದರು. ತಮಿಳುನಾಡಿನ ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಯಿಂದ ಬೆಂಗಳೂರಿಗೆ ಏರ್ ಆ್ಯಂಬುಲೆನ್ಸ್ ಮೂಲಕ ಶಿಫ್ಟ್ ಮಾಡಲಾಗಿತ್ತು. ಆದರೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
