ಬಲಿಷ್ಠ ಭಾರತ ತಂಡದ ವಿರುದ್ಧ ತವರಿನಲ್ಲಿ ಏಕದಿನ ಸರಣಿ ಸರಣಿ ಗೆದ್ದ ಬಳಿಕ ದಕ್ಷಿಣ ಆಫ್ರಿಕಾ ಸ್ಪಿನ್ನರ್ ಕೇಶವ್ ಮಹಾರಾಜ್ ‘ಜೈ ಶ್ರೀರಾಮ್’ ಎಂದು ಶೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಸಂಭ್ರಮಿಸಿದ್ದಾರೆ.
‘ಭಾರತದ ವಿರುದ್ಧ ಇದೊಂದು ಅದ್ಭುತ ಸರಣಿಯಾಗಿತ್ತು. ಈ ತಂಡದ ಸದಸ್ಯನಾಗಿರುವುದು ನನಗೆ ಹೆಮ್ಮೆಯಾಗುತ್ತಿದೆ. ಇದೀಗ ಮತ್ತಷ್ಟು ಬಲಿಷ್ಠವಾಗಿ ಮುಂದಿನ ಪಂದ್ಯಕ್ಕೆ ಸಜ್ಜಾಗಬೇಕಿದೆ… ಜೈ ಶ್ರೀರಾಮ್.. ಅಂತಾ ಕೇಶವ್ ಮಹಾರಾಜ್ ಬರೆದುಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ಆಟಗಾರ ‘ಜೈ ಶ್ರೀರಾಮ್’(Jai Shri Ram) ಎಂದು ಕೇಶವ್ ಮಹಾರಾಜ್ ಬರೆದುಕೊಂಡಿದ್ದಾರೆ.
ಕೇಶವ್ ಮಹಾರಾಜ್ ಹೀಗೆ ಪೋಸ್ಟ್ ಮಾಡುತ್ತಿದ್ದಂತೆ ಭಾರತೀಯ ಹಿಂದೂಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಪ್ರತಿಯಾಗಿ ತಾವು ಕೂಡ ‘ಜೈ ಶ್ರೀರಾಮ್’ ಎಂದು ಕಾಮೆಂಟ್ ಮಾಡುತ್ತಿದ್ದಾರೆ.
ಅಂದಹಾಗೆ 31 ವರ್ಷದ ಕ್ರಿಕೆಟಿಗ ಕೇಶವ್ ಅಸಲಿಗೆ ಭಾರತೀಯ ಮೂಲದವರು,. ಹಲವು ವರ್ಷದಿಂದ ದಕ್ಷಿಣ ಆಫ್ರಿಕಾದಲ್ಲಿ ನೆಲೆಸಿದ್ದಾರೆ.. ದಕ್ಷಿಣ ಆಫ್ರಿಕಾದಲ್ಲಿ ನಲೆಸಿದ್ದರೂ ಭಾರತೀಯ ಸಂಸ್ಕೃತಿಯನ್ನು ಈಗಲೂ ಅನುಸರಿಸುತ್ತಿದ್ದಾರೆ. ಹಾಗೆಯೇ ಹಿಂದೂ ಧರ್ಮದ ಮೇಲೂ ಅಪಾರವಾದ ನಂಬಿಕೆ ಹೊಂದಿರುವ ಕೇಶವ್ ಮಹಾರಾಜ್ ಅವರು ತಮ್ಮ ಇನ್ಸ್ಟಾಗ್ರಾಮ್ ಪ್ರೊಫೈಲ್ ಬಯೋದಲ್ಲೂ ಕೂಡ “ಜೈ ಶ್ರೀ ರಾಮ್, ಜೈ ಶ್ರೀ ಹನುಮಾನ್” ಎಂದು ಬರೆದುಕೊಂಡಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
