ಪುಟ್ಟಗೌರಿ ಮದುವೆ, ಗಟ್ಟಿಮೇಳ ಅಂತಹ ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸಿ ಖ್ಯಾತಿ ಗಳಿಸಿರುವ ನಟ ರಕ್ಷಿತ್ ಮೇಲೆ ಕುಡಿದು ರಂಪಾಟ ಮಾಡಿರುವ ಆರೋಪ ಕೇಳಿ ಬಂದಿದೆ. ಸ್ನೇಹಿತರ ಜೊತೆಗೂಡಿ ಕುಡಿದು ರಂಪಾಟ ಮಾಡಿದ್ದಾರೆ ಎಂದು ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ನಾಗರಬಾವಿ ಹತ್ತಿರ ಶೂಟಿಂಗ್ ಮಾಡುತ್ತಿದ್ದ ಗಟ್ಟಿಮೇಳ ಧಾರಾವಾಹಿ ಟೀಮ್ ಕೆಂಗೇರಿ ಬಳಿಯ ರೆಸ್ಟೋರೆಂಟ್ ಒಂದಕ್ಕೆ ರಾತ್ರಿ ಹೋಗಿದ್ದರು. ಈ ವೇಳೆ ಮದ್ಯ ಸೇವಿಸಿ ರಕ್ಷಿತ್ ಅಂಡ್ ಗ್ಯಾಂಗ್ ಗಲಾಟೆ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಹೊಯ್ಸಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಆ ವೇಳೆ ಸ್ಥಳಕ್ಕೆ ಬಂದ ಹೊಯ್ಸಳ ಪೊಲೀಸರು ರಕ್ಷಿತ್ ಮತ್ತು ಟೀಮ್ ಅವರನ್ನು ವಿಚಾರಿಸಿದ್ದಾರೆ. ಈ ವೇಳೆ ರಕ್ಷಿತ್ ಪೋಲೀಸರ ಜೊತೆಗೂ ಮಾತಿನ ಚಕಮಕಿ ನಡೆಸಿದ್ದಾರೆ.
ಬಳಿಕ ಕುಡಿದು ಗಲಾಟೆ ಮಾಡಿದ ಆರೋಪ ಮೇಲೆ ಎಲ್ಲರಿನ್ನೂ ಪೊಲೀಸರು ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದಾರೆ ಎನ್ನಲಾಗಿದೆ., ನಟ ರಕ್ಷಿತ್, ರಂಜನ್, ಅನುಷಾ, ಅಭಿಷೇಕ್, ಶರಣ್ಯ ಸೇರಿದಂತೆ 7 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇನ್ನು ಕೊರೋನಾ ನೈಟ್ ಕರ್ಫ್ಯೂ ಜಾರಿಯಲ್ಲಿದ್ದರೂ ಧಾರಾವಾಹಿ ತಂಡದವರನ್ನು ಒಳಕ್ಕೆ ಸೇರಿಸಿ ಎಣ್ಣೆ ಊಟ ಸಪ್ಲೈ ಮಾಡಿದ ಹೋಟೆಲ್ ವಿರುದ್ಧವೂ ಪ್ರಕರಣ ದಾಖಲಾಗಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
