ಇತ್ತೀಚಿಗೆ ಪದ್ಮಶ್ರೀ ಪ್ರಶಸ್ತಿ ಪಡೆದುಕೊಂಡ ಸಾವ್ಜಿ ಧೋಲಾಕಿಯಾ ತಮ್ಮ ಸ್ವಂತ ಹೆಲಿಕಾಪ್ಟರ್ ಅನ್ನು ವೈದ್ಯಕೀಯ ತುರ್ತುಸ್ಥಿತಿಗಾಗಿ ದಾನ ಮಾಡಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಹರಿಕೃಷ್ಣ ಡೈಮಂಡ್ ಕಂಪನಿಯ ಮಾಲೀಕರಾಗಿರುವ ಐವತ್ತೊಂಬತ್ತು ವರ್ಷದ ಸಾವ್ಜಿ ಧೋಲಾಕಿಯಾ ಅವರಿಗೆ ಕುಟುಂಬ ಸದಸ್ಯರು ಹೆಲಿಕಾಪ್ಟರ್ ಅನ್ನು ಉಡುಗೊರೆಯಾಗಿ ನೀಡಿದ್ದರು. ಇದೀಗ ಅವರಿಗೆ ಗಿಫ್ಟ್ ಆಗಿ ಬಂದಿದ್ದ ಹೆಲಿಕಾಪ್ಟರ್ ಅನ್ನೇ ಸೂರತ್ನ ವೈದ್ಯಕೀಯ ಮತ್ತು ಇತರ ತುರ್ತು ಪರಿಸ್ಥಿತಿಗಳಿಗಾಗಿ ಕೊಡುಗೆಯಾಗಿ ನೀಡುವ ಮೂಲಕವಾಗಿ ಎಲ್ಲಡೆ ಸುದ್ದಿಯಾಗಿದ್ದಾರೆ.
ಈ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನನ್ನ ಕುಟುಂಬವು ಇಷ್ಟು ದೊಡ್ಡ ಆಶ್ಚರ್ಯಕರ ಉಡುಗೊರೆಯನ್ನು ನೀಡುತ್ತಿದೆ ಎಂದು ನನಗೆ ತಿಳಿದಿರಲಿಲ್ಲ. ನನ್ನ ಕುಟುಂಬದಿಂದ ಉಡುಗೊರೆಯನ್ನು ನಾನು ನಿರಾಕರಿಸಲು ಸಾಧ್ಯವಿಲ್ಲ. ಆದರೆ ನಾನು ಅದನ್ನು ಸಾಮಾಜಿಕ ಉದ್ದೇಶಕ್ಕಾಗಿ ಕೊಡುಗೆಯಾಗಿ ನೀಡಲು ಮನಃಪೂರ್ವಕವಾಗಿ ನಿರ್ಧರಿಸಿದೆ” ಎಂದು ಅವರು ಹೇಳಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
