ಕೇಶಾಲಿ ಶಾಲು ಹೊದ್ದು ಶಿವಮೊಗ್ಗ ಶಾಲೆಯ ಧ್ವಜಸ್ತಂಭವೇರಿ ಕೇಸರಿ ಧ್ವಜ ಹಾರಿಸಿದ್ದ ಘಟನೆ ಬಗ್ಗೆ ನಾಗರಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಕೇಸರಿ ಧ್ವಜ ಹಾರಿಸಿದ್ದ ಧ್ವಂಜಸ್ತಂಭದಲ್ಲಿ ಇಂದು (ಬುಧವಾರ) ರಾಷ್ಟ್ರ ಧ್ವಜಾರೋಹಣ ಮಾಡಲಾಯಿತು.
ಮಾಹಿತಿಯ ಪ್ರಕಾರ ಇಂದು ಬೆಳಿಗ್ಗೆ ಸುಮಾರು 6:30ಕ್ಕೆ ಎನ್ಎಸ್ಯುಐ ಕಾರ್ಯಕರ್ತರು ರಾಷ್ಟ್ರಧ್ವಜವನ್ನು ಹಾರಿಸಿದರು. ನಂತರ ಸ್ವಲ್ಪ ಹೊತ್ತಿನ ಬಳಿಕ ಅವರೇ ಧ್ವಜವನ್ನು ಕೆಳಗೆ ಇಳಿಸಿದ್ದಾರೆ. ಈ ವೇಳೆ ಹಿಜಾಬ್ – ಕೇಸರಿ ವಿಚಾರ ಬಿಟ್ಟು ವಿದ್ಯಾರ್ಥಿಗಳು ತರಗತಿಗೆ ಹಾಜರಾಗಬೇಕು. ಶಾಂತಿ ಸುವ್ಯವಸ್ಥೆ ಕಾಪಾಡಬೇಕೆಂದು ಮನವಿ ಮಾಡಿದರು.
144 ಸೆಕ್ಷನ್ ಜಾರಿಯಲ್ಲಿದ್ದರೂ ಹೀಗೆ ಧ್ವಜಾರೋಹಣ ಮಾಡಿದ ಎನ್ಎಸ್ಯುಐ ಕಾರ್ಯಕರ್ತರನ್ನ ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ ಎಂಬ ವಿಚಾರ ಕೂಡ ತಿಳಿದುಬಂದಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
