ವಿವಾದಿತ ಸ್ವಯಂ ಘೋಷಿತ ಸ್ವಾಮೀಜಿ ನಿತ್ಯಾನಂದ ಮತ್ತೆ ಸುದ್ದಿಯಾಗಿದ್ದಾರೆ. ಈ ವೇಳೆ ನಿತ್ಯಾನಂದ ಮೃತಪಟ್ಟಿದ್ದಾರೆ ಎಂಬ ಸುಳ್ಳು ಸುದ್ದಿ ಹಬ್ಬಿದೆ. ಈ ವಿಚಾರ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬರುತ್ತಿದ್ದು, ಎಲ್ಲೆಡೆ ವೈರಲ್ ಆಗಿದೆ. ಇದನ್ನು ತಿಳಿದ ನಿತ್ಯಾನಂದ ಸ್ವಾಮಿ ಫೇಸ್ ಬುಕ್ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಇನ್ನೂ ಜೀವಂತವಾಗಿ ಹಾಗೂ ಆರೋಗ್ಯವಾಗಿದ್ದೇನೆ ಎಂದು ಹೇಳುವುದ ಮೂಲಕ ನಿತ್ಯಾನಂದ ಅವರು ಸತ್ತು ಹೋಗಿದ್ದಾರೆ ಎಂಬ ಸುಳ್ಳು ವದಂತಿಗಳಿಗೆ ತೆರೆ ಎಳೆದಿದ್ದಾರೆ.
ಈ ಬಗ್ಗೆ ತಮ್ಮ ಕೈಲಾಸ ಪೀಠದ ಹೆಸರಿನ ಫೇಸ್ಬುಕ್ ಪೇಜ್ನಲ್ಲಿ ಸ್ಪಷನೆ ನೀಡಿರುವ ನಿತ್ಯಾನಂದ ಸ್ವಾಮೀಜಿ ತಾನು ಮೃತಪಟ್ಟಿಲ್ಲ ಹಾಗೂ ಸಮಾಧಿಯಲ್ಲಿರುವುದಾಗಿ ತಿಳಿಸಿದ್ದಾರೆ., “ನಾನು ಸತ್ತಿಲ್ಲ, ಇನ್ನೂ ಜೀವಂತವಾಗಿ ಹಾಗೂ ಆರೋಗ್ಯವಾಗಿದ್ದೇನೆ. ನನ್ನ ವಿರೋಧಿಗಳು ಈ ರೀತಿಯ ಸುಳ್ಳು ಸುದ್ದಿಯನ್ನು ಹರಡುತ್ತಿದ್ದಾರೆ. ನಾನು ಎಲ್ಲಿಗೂ ಓಡಿಯೂ ಹೋಗಿಲ್ಲ. ನಾನು ನನ್ನ ಕೈಲಾಸದಲ್ಲಿ ಇದ್ದೇನೆ. ನಾನು ಸದ್ಯ ಸಮಾಧಿಯಲ್ಲಿದ್ದೇನೆ. ತಾನು ಸಮಾಧಿಯಲ್ಲಿದ್ದೇನೆ 2026ಕ್ಕೆ ಲೌಖಿಕ ಜಗತ್ತಿಗೆ ಹಿಂತಿರುಗುತ್ತೇನೆ” ಎಂದು ಹೇಳಿದ್ದಾರೆ.
‘ನಾನು ಈಗಾಗಲೇ ಸತ್ತು ಹೋಗಿದ್ದೇನೆ ಎಂದು ಕೆಲವರು ಸುದ್ದಿ ಹಬ್ಬಿಸಿದ್ದಾರೆ. ಅದೆಲ್ಲ ಸುಳ್ಳು. ಈಗಲೂ 27 ವೈದ್ಯರ ತಂಡ ನನ್ನನ್ನು ನೋಡಿಕೊಳ್ಳುತ್ತಿದೆ. ಸಮಾಧಿ ಸ್ಥಿತಿಯಲ್ಲಿದ್ದರೂ ನಿತ್ಯ ಶಿವ ಪೂಜೆ ಮಾಡುವುದನ್ನು ಬಿಟ್ಟಿಲ್ಲ. ಆದರೆ ನೀರು–ಆಹಾರ ಸ್ವೀಕರಿಸುತ್ತಿಲ್ಲ’ ಎಂದೂ ನಿತ್ಯಾನಂದ ಸ್ಪಷ್ಟನೆ ನೀಡಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
