ಹಿಂದಿ ರಾಷ್ಟ್ರ ಭಾಷೆ ಎಂದು ಹೇಳಿದ್ದೆ ತಡ ಇದರ ವಿರುದ್ಧ ಹಲವಾರು ಸೆಲೆಬ್ರೆಟಿಗಳು ಧನಿ ಎತ್ತಲು ಶುರುಮಾಡಿದರು. ಸೆಲೆಬ್ರಿಟಿಗಳಲ್ಲದೆ ಗಣ್ಯ ವ್ಯಕ್ತಿಗಳು ಸಹ ಇದರ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದರು. ಇದೀಗ ಇವರ ಸಾಲಿಗೆ ತಮಿಳುನಾಡಿನ ರಾಜ್ಯಪಾಲರಾದ ಆರ್. ಏನ್ ರವಿ ಅವರು ಸೇರಿಕೊಂಡಿದ್ದಾರೆ.
ತಮಿಳುನಾಡಿನ ಉನ್ನತ ಶಿಕ್ಷಣ ಸಚಿವರಾದ ಪೊನ್ಮುಡಿ ಅವರು ಹಿಂದಿ ಹೇರಿಕೆಯನ್ನು ಖಂಡಿಸಿ ಹಿಂದಿ ಮಾತನಾಡುವವರೆಲ್ಲರೂ ಪಾನಿಪುರಿ ಮಾರುವವರು ಎಂದು ಟೀಕಿಸಿದರು.
ಈ ಕುರಿತಂತೆ ಪ್ರತಿಕ್ರಿಯಿಸಿದ ರಾಜ್ಯಪಾಲ ಆರ್.ಎನ್.ರವಿ ಅವರು, ಕೇಂದ್ರ ಸರ್ಕಾರ ತಮಿಳುನಾಡಿನಲ್ಲಿ ಬೇರೆ ಯಾವುದೋ ಭಾಷೆಯನ್ನು ಹೇರಲಾಗುತ್ತಿದೆ ಎಂಬ ಭಾವನೆ ಕೆಲವರಿಂದ ಸೃಷ್ಟಿಯಾಗುತ್ತಿದೆ. ಆದರೆ ಇದು ಸತ್ಯಕ್ಕೆ ದೂರವಾದ ಮಾತು. ರಾಷ್ಟ್ರೀಯ ಶೈಕ್ಷಣಿಕ ನೀತಿಯ ಸಂಪೂರ್ಣ ಉದ್ದೇಶ ಪ್ರಾದೇಶಿಕ ಭಾಷೆಗಳಲ್ಲಿ ಅಥವಾ ಮಾತೃಭಾಷೆಯಲ್ಲಿ ಕಲಿಕೆಗೆ ಒತ್ತು ನೀಡುವುದಾಗಿದೆ ಎಂದು ಹೇಳಿದ್ದಾರೆ. ಹಿಂದಿ ಅಥವಾ ಯಾವುದೇ ಭಾಷೆಯನ್ನು ಹೀರುವ ಪ್ರಶ್ನೆಯೇ ಇಲ್ಲವೆಂದು ಅವರು ಹೇಳಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
