ಕೆಲವು ತಿಂಗಳ ಕಾಲ ಬೆಂಗಳೂರಿನಲ್ಲಿ ಸ್ಟಾಪ್ ಆಗಿದ್ದ ಟೋಯಿಂಗ್ ಕಾರ್ಯವನ್ನು ಮತ್ತೆ ಪ್ರಾರಂಭಿಸುವುದಾಗಿ ಹೊಸ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಸೂಚಿಸಿದ್ದಾರೆ. ಟೋಯಿಂಗ್ ಸಮಸ್ಯೆ ಇಂದ ಬೇಕಾಬಿಟ್ಟು ಗಾಡಿಯನ್ನು ನಿಲ್ಲಿಸುತ್ತಿದ್ದ ಸವಾರರಿಗೆ ಮತ್ತೆ ಟೋಯಿಂಗ್ ಬಿಸಿ ತಟ್ಟುವಲ್ಲಿ ಅನುಮಾನವಿಲ್ಲ.
ಇತ್ತೀಚಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ” ಟೋಯಿಂಗ್ ಸಮಸ್ಯೆಯಿಂದ ಆದ ಗೊಂದಲವನ್ನು ಸರಿಪಡಿಸಿ ಶೀಘ್ರದಲ್ಲೇ ಟೋಯಿಂಗ್ ವ್ಯವಸ್ಥೆಯನ್ನು ಮತ್ತೆ ಪುನರಾರಂಭಿಸಲು ಚಿಂತಿಸುತ್ತಿದ್ದೇವೆ. ಇದರ ಕುರಿತು ಸರಕಾರದ ಜೊತೆ ಚರ್ಚಿಸಿ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡುವುದಾಗಿ” ತಿಳಿಸಿದ್ದಾರೆ.
ನಗರದಲ್ಲಿ ಈಗೀಗ ಎಲ್ಲಾ ಚಟುವಟಿಕೆಗಳು ಮೊದಲಿನಂತೆ ನಡೆಯುತ್ತಿದೆ. ಸಹಜವಾಗಿ ಇದರಿಂದ ಟ್ರಾಫಿಕ್ ಸಮಸ್ಯೆಗಳು ಹೆಚ್ಚಾಗುತ್ತಿದೆ. ಹೆಚ್ಚಾಗುತ್ತಿರುವ ಟ್ರಾಫಿಕ್ ಸಮಸ್ಯೆಯನ್ನು ಕಡಿಮೆಗೊಳಿಸಲು ಮತ್ತೆ ಟೋಯಿಂಗ್ ವ್ಯವಸ್ಥೆಯನ್ನು ತರಬೇಕೆಂದು ಚಿಂತಿಸುತ್ತಿದ್ದೇವೆ ಮತ್ತು ಈ ನಿಟ್ಟಿನಲ್ಲಿ ಕೆಲಸಗಳು ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
