ಮುಂದಿನ ವರ್ಷ ಅಂದ್ರೆ 2023ಕ್ಕೆ ಕರ್ನಾಟಕ ವಿಧಾನ ಸಭಾ ಚುನಾವಣಾ ನಡೆಯಲಿದೆ.. ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಉಳಿದಿರುವಾಗಲೇ ರಾಜಕೀಯ ಪಕ್ಷಗಳ ಚುನಾವಣಾ ತಯಾರಿ ಭರದಿಂದ ಸಾಗಿದೆ.. ಈ ಮದ್ಯೆ ಆಯಾ ಪಕ್ಷಗಳ ಟಿಕೆಟ್ ಆಕಾಂಕ್ಷಿಗಳು ಸಹ ಟಿಕೆಟ್ ದಕ್ಕಿಸಿಕೊಳ್ಳಲು ಕಸರತ್ತು ನಡೆಸುತ್ತಿದ್ದಾರೆ. ಈಗ ನಟ ಸಾಯಿಕುಮಾರ್ ಅವರು ಟಿಕೆಟ್ ವಿಚಾರವಾಗಿ ಮಾತನಾಡಿದ್ದಾರೆ. ಬಿಜೆಪಿಯವರು ಟಿಕೆಟ್ ಕೊಟ್ಟರೆ ಮುಂದಿನ ವರ್ಷ ಸ್ಪರ್ಧೆ ಮಾಡುವುದಾಗಿ ಅವರು ಘೋಷಣೆ ಮಾಡಿದ್ದಾರೆ.
‘ಬಿಜೆಪಿಯವರು ಟಿಕೆಟ್ ಕೊಟ್ಟರೆ ಮುಂದಿನ ವರ್ಷ ಸ್ಪರ್ಧೆ ಮಾಡುತ್ತೇನೆ. ಎಲೆಕ್ಷನ್ನಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದಿದ್ದರೂ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ. ಬಿಜೆಪಿ ಕೆಲಸ ಮಾಡಿಕೊಂಡು ಕ್ಯಾಂಪೇನ್ ಮಾಡುತ್ತೇನೆ. ಕಳೆದ ಬಾರಿ ಎಲೆಕ್ಷನ್ನಲ್ಲಿ ಸೋತೆ, ಏನೂ ಮಾಡಲು ಆಗುವುದಿಲ್ಲ’ ಎಂದಿದ್ದಾರೆ ನಟ ಸಾಯಿಕುಮಾರ್.
ಈಗಾಗಲೇ ಸಾಯಿಕುಮಾರ್ ತಮ್ಮ ತಾಯಿ ಊರು ಬಾಗೇಪಲ್ಲಿ ಕ್ಷೇತ್ರದಿಂದ 2008ನೇ ಸಾಲಿನಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದು ಸೋತಿದ್ದರು. ಇದಾಗಿ 2018ಲ್ಲಿ ಅದೇ ಕ್ಷೇತ್ರದಿಂದ ಮತ್ತೆ ಚುನಾವಣೆಗೆ ನಿಂತಿದ್ದರು.. ಆದರೆ ಕಾಂಗ್ರೆಸ್ ಅಭ್ಯರ್ಥಿ ಸುಬ್ಬಾರೆಡ್ಡಿ ವಿರುದ್ಧ ಸಾಯಿಕುಮಾರ್ ಮತ್ತೆ ಸೋಲು ಅನುಭವಿಸಬೇಕಾಯಿತು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
