ಸರಳ ವಾಸ್ತು ಮೂಲಕವೇ ಖ್ಯಾತರಾಗಿದ್ದ ಚಂದ್ರಶೇಖರ ಗುರೂಜಿ ಅವರನ್ನು ಹುಬ್ಬಳಿಯ ದಿ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಮಂಗಳವಾರ ಮಧ್ಯಾಹ್ನ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿತ್ತು. ಕಲಘಟಗಿ ತಾಲ್ಲೂಕಿನ ದುಮ್ಮವಾಡದ ಮಹಾಂತೇಶ ಶಿರೂರ ಮತ್ತು ಧಾರವಾಡದ ಮಂಜುನಾಥ ಮರೇವಾಡ ಹತ್ಯೆ ಆರೋಪಿಗಳನ್ನ ಈಗಾಗಲೇ ಪೊಲೀಸರು ಹಿಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಥಮ ಮಾಹಿತಿ ವರದಿ( ಎಫ್ ಐ ಆರ್) ದಾಖಲಾಗಿದೆ. ಎಫ್ಐಆರ್ನಲ್ಲಿ ಮಹತ್ವದ ಅಂಶಗಳು ಬಯಲಾಗಿದೆ.
ಘಟನೆಗೆ ಸಂಬಂಧಿಸಿ ಗುರೂಜಿ ಅವರ ಸಹೋದರನ ಮಗ ಸಂಜಯ್ ಅಂಗಡಿ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣಕ್ಕೆ ಸಂಭಂದಿಸಿದಂತೆ ಸಂಬಂಧಿಸಿದಂತೆ ಪ್ರಥಮ ಮಾಹಿತಿ ವರದಿ( ಎಫ್ ಐ ಆರ್) ದಾಖಲಾಗಿದೆ. ೨೦೦೮ರಿಂದ ಮಹಾಂತೇಶ ಶಿರೂರು ಗುರೂಜಿ ಹತ್ತಿರ ಕೆಲಸಕ್ಕೆ ಆರೋಪಿ ಸೇರಿದ್ದ. ೨೦೧೫ರಲ್ಲಿ ಮಹಾಂತೇಶ್ ಶಿರೂರನನ್ನು ಮುಂಬೈಯಲ್ಲಿ ಉಪಾಧ್ಯಕ್ಷನಾಗಿ ಕಂಪನಿಗೆ ನೇಮಕಗೊಂಡಿದ್ದ. ಕಂಪನಿಗೆ ಬರುತ್ತಿದ್ದ ಜನರ ಹತ್ತಿರ ಹಣವನ್ನು ಮಹಾಂತೇಶ್ ಪಡೆಯುತ್ತಿದ್ದ ಆರೋಪ ಕೇಳಿಬರುತ್ತದೆ. ಮಹಾಂತೇಶ್ ಜೊತೆಗೆ ೨೦-೨೫ ಜನರು ಶಾಮೀಲಾಗಿದ್ದರು. ಈ ಬಗ್ಗೆ ಎಮ್.ಡಿ.ಯವರಿಗೆ ಹಾಗೂ ಫಿರ್ಯಾದಿದಾರರಿಗೆ ವಿಷಯ ಗೊತ್ತಾಗಿ ಕೆಲಸದಿಂದ ತೆಗೆದು ಹಾಕುತ್ತಾರೆ.
‘ಆ ಸಿಟ್ಟಿನಿಂದ ಹುಬ್ಬಳ್ಳಿ ಗೋಕುಲ ರಸ್ತೆ, ಜೆಸಿ ನಗರದಲ್ಲಿ ಗುರೂಜಿ ನಿರ್ಮಿಸಿರುವ ಅಪಾರ್ಟ್ಮೆಂಟ್ನಲ್ಲಿ ಪಾರ್ಕಿಂಗ್ಗೆ ಜಾಗ ಕೊಟ್ಟಿರಲಿಲ್ಲ ಹಾಗೂ ಸೋಲಾರ್ ವ್ಯವಸ್ಥೆ ಅಳವಡಿಕೆ ಮಾಡಿಲ್ಲ ಎಂದು ಮಹಾಂತೇಶ ಧಾರವಾಡ ಗ್ರಾಹಕರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣ ಹಿಂಪಡೆಯಲು ಗುರೂಜಿ ಅವರಲ್ಲಿ ಹಣ ಕೇಳುತ್ತಿದ್ದರು. ಆಗಾಗ ಜೀವ ಬೆದರಿಕೆ ಹಾಕಿ ಮಾನಸಿಕ ಹಿಂಸೆ ನೀಡುತ್ತಿದ್ದರು. ಹಣ ನೀಡದ ಹಿನ್ನೆಲೆಯಲ್ಲಿ ಹಾಗೂ ಕೆಲಸದಿಂದ ತೆಗೆದು ಹಾಕಿದ್ದರಿಂದ ಹತ್ಯೆ ಮಾಡಿದ್ದಾರೆ’ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
