ತಮಿಳು ಚಿತ್ರರಂಗದ ಪ್ರಖ್ಯಾತ ನಟ ನೆನ್ನೆ ಬೆಳಿಗ್ಗೆ ಲಘು ಹೃದಯಾಘಾತಕ್ಕೆ ಒಳಗಾಗಿದ್ದರು ಎಂದು ಸುದ್ದಿಯಾಗಿತ್ತು. ಈ ಹಿನ್ನಲೆಯಲ್ಲಿ ಅವರು ಚೆನ್ನೈ ನಲ್ಲಿನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಯಾನ್ ವಿಕ್ರಮ್ ಅವರಿಗೆ ಹಾರ್ಟ್ ಅಟ್ಯಾಕ್ ಆಗಿಲ್ಲ ಎಂದು ಚೆನ್ನೈನ ಕಾವೇರಿ ಆಸ್ಪತ್ರೆ ಸ್ಪಷ್ಟನೆ ನೀಡಿದೆ.
ವಿಕ್ರಮ್ ಅವರ ಆರೋಗ್ಯದ ಬಗ್ಗೆ ಕಾವೇರಿ ಆಸ್ಪತ್ರೆ ಬಿಡುಗಡೆ ಮಾಡಿರುವ ಮೆಡಿಕಲ್ ಬುಲೆಟಿನ್ ನಲ್ಲಿ ಈ ಮಾಹಿತಿಯನ್ನು ನೀಡಲಾಗಿದೆ. ಮೆಡಿಕಲ್ ಬುಲೆಟಿನ್ನಲ್ಲಿ ಚಿಯಾನ್ ವಿಕ್ರಮ್ ಅವರಿಗೆ ಸಣ್ಣದಾಗಿ ಎದೆನೋವು ಕಾಣಿಸಿಕೊಂಡಿತ್ತು ಎಂದು ಕಾವೇರಿ ಆಸ್ಪತ್ರೆ ಸ್ಪಷ್ಟ ಪಡಿಸಿದೆ.
ಮೆಡಿಕಲ್ ಬುಲೆಟಿನ್ನಲ್ಲಿ ಏನಿದೆ?
‘’ವಿಕ್ರಮ್ ಅವರಿಗೆ ಕಾರ್ಡಿಯಾಕ್ ಅರೆಸ್ಟ್ ಆಗಿಲ್ಲ. ಎದೆನೋವು ಕಾಣಿಸಿಕೊಂಡ ಕಾರಣ ಅವರನ್ನು ಕಾವೇರಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಯಿತು. ತಜ್ಞ ವೈದ್ಯರು ವಿಕ್ರಮ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.. ಸದ್ಯ ವಿಕ್ರಮ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಶೀಘ್ರದಲ್ಲೇ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು’’ ಎಂದು ಮೆಡಿಕಲ್ ಬುಲೆಟಿನ್ನಲ್ಲಿ ಕಾವೇರಿ ಆಸ್ಪತ್ರೆ ತಿಳಿಸಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
