ಇತ್ತೀಚಿಗೆ ಪ್ರತಿಭಾನ್ವಿತ ನಟಿ ಸಾಯಿ ಪಲ್ಲವಿ ಅವರು ನೀಡಿದ್ದ ಹೇಳಿಕೆಯೊಂದು ಸಾಮಾಜಿಕ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಧರ್ಮ ಮತ್ತು ದೇವರ ಹೆಸರಿನಲ್ಲಿ ಜನರ ಮೇಲೆ ಹಲ್ಲೆ ಮಾಡುವುದು ತಪ್ಪು ಎಂದು ಹೇಳಿದ್ದ ಸಾಯಿ ಪಲ್ಲವಿ ಅವರು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮತ್ತು ಮುಸ್ಲಿಂ ಡ್ರೈವರ್ ಮೇಲಿನ ಹಲ್ಲೆಯ ಘಟನೆಯನ್ನು ಪರಸ್ಪರ ಹೋಲಿಸಿ ಮಾತನಾಡಿದ್ದರು.. ಸಾಯಿ ಪಲ್ಲವಿ ಅವರ ಮಾತಿಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದರೇ ಕೆಲವರು ವಿರೋಧವನ್ನೂ ಹೊರಹಾಕಿದ್ದರು.
ಸಾಯಿ ಪಲ್ಲವಿಯ ವಿರುದ್ಧ ಹಲವು ಕಡೆ ದೂರು ದಾಖಲಾಗಿತ್ತು. ಹಾಗೆಯೇ ಹೈದರಾಬಾದ್ ನಲ್ಲೂ ದೂರು ದಾಖಲಾಗಿತ್ತು. ಹಾಗಾಗಿ ವಿಚಾರಣೆಗೆ ಹಾಜರಾಗುವಂತೆ ಸಾಯಿ ಪಲ್ಲವಿಗೆ ನೋಟಿಸ್ ಜಾರಿ ಮಾಡಿದ್ದರು. ಅದನ್ನು ರದ್ದುಗೊಳಿಸುವಂತೆ ಸಾಯಿ ಪಲ್ಲವಿ ಕೋರ್ಟ್ ಮೆಟ್ಟಿಲೇರಿದ್ದರು. ಸಾಯಿ ಪಲ್ಲವಿಯ ಮನವಿಯನ್ನು ತೆಲಂಗಾಣ ಹೈಕೋರ್ಟ್ ಕೋರ್ಟ್ ತಿರಸ್ಕರಿಸಿದೆ.
ಸಾಯಿ ಪಲ್ಲವಿ ಅವರ ಹೇಳಿಕೆ ವಿರುದ್ಧ ಬಜರಂಗದಳದ ಕಾರ್ಯಕರ್ತ ಅಖಿಲ್ ನಟಿಯ ವಿರುದ್ಧ ದೂರು ನೀಡಿದ್ದರು. ಕಾನೂನು ಸಲಹೆ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಾಯಿ ಪಲ್ಲವಿಗೆ ಜೂನ್ 21ರ ಒಳಗೆ ಕೋರ್ಟ್ ಮುಂದೆ ಹಾಜರಾಗುವಂತೆ ಕೋರ್ಟ್ ನಿಂದ ನೋಟಿಸ್ ಜಾರಿ ಮಾಡಿದ್ದಾರೆ. ಕೇಸ್ ರದ್ದುಗೊಳಿಸುವಂತೆ ಕೋರಿ ಸಾಯಿ ಪಲ್ಲವಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ನಟಿಯ ಅರ್ಜಿಯನ್ನ ತೆಲಂಗಾಣ ಹೈಕೋರ್ಟ್ ಜಡ್ಜ್ ಲಲಿತಾ ವಜಾಗೊಳಿಸಿದ್ದಾರೆ. ವಿಚಾರಣೆಗೆ ಹಾಜರಾಗಬೇಕು ಎಂದು ಸೂಚನೆ ನೀಡಿದ್ದಾರೆ.
‘ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವುದು ಅಕ್ರಮವಾಗಿದೆ. ಹೀಗಾಗಿ, ನೋಟಿಸ್ ರದ್ದು ಮಾಡಲು ಸೂಚನೆ ನೀಡಿ’ ಎಂದು ಸಾಯಿ ಪಲ್ಲವಿ ಕೋರ್ಟ್ನಲ್ಲಿ ಮನವಿ ಮಾಡಿಕೊಂಡಿದ್ದರು. ಆದರೆ, ತೆಲಂಗಾಣ ಹೈಕೋರ್ಟ್ನ ನ್ಯಾಯಮೂರ್ತಿ ಲಲಿತಾ ಅವರು ಸಾಯಿ ಪಲ್ಲವಿ ಅವರ ಮನವಿಯನ್ನು ತಿರಸ್ಕರಿಸಿದ್ದಾರೆ. ಜತೆಗೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
