fbpx
ಸಮಾಚಾರ

ನಟ ಶಿವರಂಜನ್ ಮೇಲೆ ಗುಂಡಿನ ದಾಳಿ! ದಾಳಿಯಿಂದ ಪಾರಾದ ಶಿವರಂಜನ್ ಹೇಳಿದ್ದೇನು?

ಚಿತ್ರನಟ, ಉದ್ಯಮಿ ಶಿವರಂಜನ್ ಬೋಳಣ್ಣ ಅವರ ಮೇಲೆ ನೆನ್ನೆ ರಾತ್ರಿ ಗುಂಡಿನ ದಾಳಿ ನಡೆದಿದ್ದು ಇವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೊದಲು ಇದು ದುಷ್ಕರ್ಮಿಗಳು ನಡೆಸಿದ್ದಾರೆ ಎಂಬ ಮಾಹಿತಿ ಇತ್ತು. ಆದರೆ ಇದೀಗ ಇದು ಇವರ ಸಂಬಂಧಿಕರಿಂದ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ವಿಷಯದ ಕುರಿತು ಸ್ವತಃ ಶಿವರಂಜನ್ ಬೋಳಣ್ಣ ಅವರೆ ಮಾಹಿತಿ ನೀಡಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿದ ಇವರು “ಗುರುಹಿರಿಯರು ಹಾಗೂ ಸ್ನೇಹಿತರ ಆಶೀರ್ವಾದದಿಂದ ನಾನು ಬದುಕಿದ್ದೇನೆ. ನಿನ್ನೆ ಸಂಜೆ 7.30ರ ಸುಮಾರಿಗೆ ನನ್ನ ಮೇಲೆ ಸಂಬಂಧಿಕರರಿಂದಲೇ ಗುಂಡಿನ ದಾಳಿ ಆಗಿದೆ. ನಮ್ಮ ಸಹೋದರ ಮತ್ತು ಆತನ ಹೆಂಡತಿ ಅಕ್ಕನ ಮಗ ಸೇರಿ ನನ್ನ ಮೇಲೆ 5 ಸುತ್ತು ಗುಂಡಿನ ದಾಳಿ ಮಾಡಿದ್ದಾರೆ. ಅದೃಷ್ಟವಶಾತ್ ನನಗೆ ಯಾವುದೇ ಗುಂಡು ತಗುಲಿಲ್ಲ. ಆದರೆ ಇಂತಹ ಘಟನೆಗಳು ಸಮಾಜದಲ್ಲಿ ನಡೆಯಬಾರದು. ಇದನ್ನ ನಾನು ಖಂಡಿಸುತ್ತೇನೆ” ಎಂದರು.

ಈ ಘಟನೆ ನಡೆದ ನಂತರ ತನಿಖೆ ಚುರುಕು ಗೊಳಿಸಿರುವ ಪೊಲೀಸರು ಈಗಾಗಲೇ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿಯನ್ನು ಶೀಘ್ರದಲ್ಲೇ ಬಂಧಿಸುವುದಾಗಿ ಭರವಸೆ ನೀಡಿದ್ದಾರೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ. ನಾನು ಆರಾಮಾಗಿದ್ದೇನೆ ಎಂದು ಶಿವರಂಜನ್ ತಳಿಸಿದ್ದಾರೆ.

ಅಮೃತಸಿಂಧು, ರಾಜರಾಣಿ ಸೇರಿದಂತೆ ಕೆಲವು ಚಿತ್ರಗಳಲ್ಲಿ ಶಿವರಂಜನ್ ನಟಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top