ಸ್ಯಾಂಡಲ್ವುಡ್ ಯುವ ನಟ, ‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್ ಅವರ ತಾಯಿ ಸುಜಾತ ವೀರಪ್ಪ ಅಂಬಾರ್ ಅವರು ನಿಧನರಾಗಿದ್ದಾರೆ. ಸುಜಾತಾ ಅಂಬರ್ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಕಳೆದ ರಾತ್ರಿ ಅವರು ಮಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಸುಜಾತಾ ಅಂಬರ್ ಅವರ ಅಂತ್ಯಕ್ರಿಯೆ ಇಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಹೇಳಲಾಗಿದೆ.
ಸುಜಾತ ಅಂಬರ್ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ನೇತಾರರಾದ ವೀರಪ್ಪ ಅಂಬಾರ್ ಅವರ ಧರ್ಮಪತ್ನಿಯಾಗಿದ್ದರು. ದುರ್ಗಾಪರಮೇಶ್ವರಿ ಮಹಿಳಾ ಸಂಘದ ಕಾರ್ಯದರ್ಶಿಯಾಗಿದ್ದ ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.
ಸುಜಾತ ಅವರ ಪುತ್ರ ಪೃಥ್ವಿ ಅಂಬಾರ್ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದು, ದಿಯಾ ಸಿನಿಮಾ ಮೂಲಕ ಸಾಕಷ್ಟು ಹೆಸರು ಮಾಡಿದ್ದಾರೆ. ಇತ್ತೀಚೆಗೆ ತೆರೆಕಂಡ ಬೈರಾಗಿ ಮತ್ತು ಶುಗರ್ ಲೆಸ್ ಚಿತ್ರದಲ್ಲಿ ಪೃಥ್ವಿ ನಟಿಸಿದ್ದಾರೆ. ಇವರ ಸಿನಿಮಾಗಳು ಪ್ರೇಕ್ಷಕರಿಗೆ ಹತ್ತಿರವಾಗುತ್ತಿದ್ದು, ಈ ಖುಷಿಯಲ್ಲಿ ಇರಬೇಕಾದ ಕುಟುಂಬ ದುಃಖದಲ್ಲಿ ಮುಳುಗಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
