ಚಂದನವನದಲ್ಲಿ ಬರೋಬ್ಬರಿ 53 ವರ್ಷಗಳ ಕಾಲ ಮೇಕ್ ಅಪ್ ಮ್ಯಾನ್ ಆಗಿ ಕೆಲಸ ನಿರ್ವಹಿಸಿದ ಎಂ.ಎಸ್. ಕೇಶವಣ್ಣ ಶುಕ್ರವಾರ (ಜುಲೈ 15) ನಿಧನರಾದರು.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಕಳೆದ ಎರಡು ದಿನಗಳಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮಧ್ಯಾಹ್ನ 1:40ಕ್ಕೆ ನಿಧನರಾದರು. ಇಂದು ಮೈಸೂರಿನಲ್ಲಿ ಇವರ ಅಂತ್ಯಕ್ರಿಯೆ ನಡೆಯಲಿದೆ.
ಇವರು ಸುಮಾರು 25-30 ವರ್ಷಗಳ ಕಾಲ ರಾಜ್ಕುಮಾರ್ ಅವರ ಕಂಪನಿಯಲ್ಲಿ ಮೇಕಪ್ ಆರ್ಟಿಸ್ಟ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಇದಾದ ನಂತರ ಇವರು ಮೊದಲ ಬಾರಿಗೆ ಹಾಸ್ಯ ಕಲಾವಿದ ನರಸಿಂಹ ರಾಜು ಅವರಿಗೆ ಮೇಕಪ್ ಮಾಡುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ ಸಿನಿ ಲೋಕದ ದಿಗ್ಗಜರಾದ ವರನಟ ರಾಜ್ ಕುಮಾರ್, ರೆಬೆಲ್ ಸ್ಟಾರ್ ಅಂಬರೀಷ್, ರಜನಿಕಾಂತ್, ಪುನೀತ್ ರಾಜ್ ಕುಮಾರ್, ಅನಂತ್ ನಾಗ್, ಶಿವರಾಜ್ ಕುಮಾರ್ ಸೇರಿದಂತೆ ಹಲವಾರು ಸಿನಿ ದಿಗ್ಗಜರಿಗೆ ಮೇಕ್ ಅಪ್ ಮಾಡಿದ್ದಾರೆ.
ಇವರು ಮೇಕ್ ಅಪ್ ಆರ್ಟಿಸ್ಟ್ ಆಗಿ ಕೆಲಸ ಮಾಡಿದ ಕೊನೆಯ ಸಿನಿಮಾ ಡಿಬಾಸ್ ದರ್ಶನ್ ಅಭಿನಯದ ಕುರುಕ್ಷೇತ್ರ. ಇವರ ನಿಧನಕ್ಕೆ ಸ್ಯಾಂಡಲ್ವುಡ್ನ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
