fbpx
ಸಮಾಚಾರ

ಕಲಿಯುಗದ ಕರ್ಣ: ಸರ್ಕಾರಕ್ಕೆ ಬರೋಬ್ಬರಿ 600 ಕೋಟಿ ಆಸ್ತಿ ದಾನ ಮಾಡಿದ ವೈದ್ಯ

ಉತ್ತರ ಪ್ರದೇಶದ ಮೊರದಾಬಾದ್‌ನ ಉದ್ಯಮಿಯೊಬ್ಬರು ತಮ್ಮ ಇಡೀ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ದಾನ ಮಾಡಿದ್ದಾರೆ. ಬಡವರಿಗೆ ಸಹಾಯ ಮಾಡುವ ಸಲುವಾಗಿ ಅವರು ಈ ಮಹತ್ಕಾರ್ಯ ಕೈಗೊಂಡಿದ್ದಾರೆ. ವೈದ್ಯ ಅರವಿಂದ್ ಗೋಯಲ್ ಅವರ ಈ ಪರೋಪಕಾರಿ ಮನೋಭಾವಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಅವರು ಬಡವರಿಗೆ ಸಹಾಯ ಮಾಡಲು ಉತ್ತರ ಪ್ರದೇಶ ಸರ್ಕಾರಕ್ಕೆ ತಮ್ಮ ಸಂಪೂರ್ಣ 600 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ದಾನ ಮಾಡಿದ್ದಾರೆ. ಕಳೆದ 50 ವರ್ಷಗಳಿಂದ ಅರವಿಂದ್ ಗೋಯಲ್ ಅವರು ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಸುಮಾರು 25 ವರ್ಷಗಳ ಹಿಂದೆಯೇ ಆಸ್ತಿಯನ್ನು ದಾನ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಡವನೊಬ್ಬ ಚಳಿಯಲ್ಲಿ ನಡುಗುತ್ತಿರುವುದನ್ನು ನೋಡಿದ ಮೇಲೆ ಇಂಥದ್ದೊಂದು ಯೋಚನೆ ಅವರ ಮನಸ್ಸಿನಲ್ಲಿ ಮೂಡಿತು ಎನ್ನಲಾಗಿದೆ. ರಾಜ್ಯ ಸರಕಾರಕ್ಕೆ ದೇಣಿಗೆ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಲ್ಲದೆ, ಈ ಹಿಂದೆಯೂ ಅವರು ಜನರಿಗೆ ಸಾಕಷ್ಟು ಸಹಾಯ ಮಾಡಿದ್ದು, ಪ್ರಖ್ಯಾತರೆನಿಸಿಕೊಂಡಿದ್ದಾರೆ. ಈಗಿನ ರಾಷ್ಟ್ರಪತಿ ಸೇರಿ ಈ ಹಿಂದಿನ ಮೂವರು ರಾಷ್ಟ್ರಪತಿಗಳಿಂದ ಸನ್ಮಾನವನ್ನೂ ಮಾಡಿಸಿಕೊಂಡಿದ್ದಾರೆ ಅರವಿಂದ್‌ ಗೋಯಲ್‌.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top