ಹಿರಿಯ ಚಿಂತಕ, ಸಾಹಿತಿ, ಸಾಹಿತ್ಯಲೋಕದ ಪ್ರಖ್ಯಾತ ವಿಮರ್ಶಕರಾಗಿದ್ದ ಜಿ. ರಾಜಶೇಖರ್ ನಿಧನರಾಗಿದ್ದಾರೆ. ೭೫ ವರ್ಷ ವಯಸ್ಸಿನ ರಾಜಶೇಖರ್ ಅವರು ಅನಾರೋಗ್ಯದ ಕಾರಣ ಬುಧವಾರ (ಜುಲೈ 20) ರಾತ್ರಿ 11:15 ಕ್ಕೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಪಾರ್ಕಿನ್ಸನ್ ಪ್ಲಸ್ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಅವರು ಶ್ವಾಸಕೋಶದ ಸಮಸ್ಯೆ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ರಾಜಶೇಖರ ಅವರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ರಾಜಶೇಖರ್ ಅವರು 1946ರಲ್ಲಿ ಜನಿಸಿದರು. ನಂತರ ಉಡುಪಿಯಲ್ಲಿ ಪದವಿವರೆಗಿನ ವಿದ್ಯಾಭ್ಯಾಸ ಮುಗಿಸಿ ಕೆಲಕಾಲ ಶಿಕ್ಷಕರಾಗಿ ಕೆಲಸ ಮಾಡಿ ನಂತರ ಎಲ್ಐಸಿಯಲ್ಲಿ ಕಾರ್ಯನಿರ್ವಹಿಸಿದ್ದರು. ಸಾಹಿತ್ಯ -ಸಮಾಜ ಹಾಗೂ ಸಾಂಸ್ಕೃತಿಕ ರಾಜಕಾರಣ ಸೇರಿದಂತೆ ಅವರು ನಿರಂತರವಾಗಿ ಬರೆಯುತ್ತಿದ್ದರು. ಅಷ್ಟೇ ಅಲ್ಲದೆ ಸಮಕಾಲೀನ ತುರ್ತಿನ ವಿದ್ಯಮಾನಗಳ ಬಗ್ಗೆಯೂ ಕೂಡ ಬರೆಯುತ್ತಿದ್ದರು. ರಾಜಶೇಖರ ಅವರ ಬಹುವಚನ ಭಾರತ ಕೃತಿಗೆ 2015ರಲ್ಲಿ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿತ್ತು. ಆದರೆ ಅದನ್ನು ಅವರು ಸ್ವೀಕರಿಸಲು ನಿರಾಕರಿಸಿದ್ದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
