ತೀವ್ರ ಕುತೂಹಲ ಕೆರಳಿಸಿದ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ನಿರೀಕ್ಷೆಯಂತೆ ಗೆಲುವು ಸಾಧಿಸಿದ್ದಾರೆ. ಮತ ಎಣಿಕೆಯ ಆರಂಭದಿಂದಲೂ ಎಲ್ಲಾ ಸುತ್ತಿನಲ್ಲೂ ವಿಪಕ್ಷ ಅಭ್ಯರ್ಥಿ ಯಶವಂತ ಸಿನ್ಹಾ ಅವರಿಗಿಂತ ಮುನ್ನಡೆ ಸಾಧಿಸುತ್ತಾ ಬಂದಿದ್ದ ದ್ರೌಪದಿ ಮುರ್ಮು, ಮೂರನೇ ಎರಡರಷ್ಟು ಬಹುಮತ ಪಡೆಯುವುದರೊಂದಿಗೆ ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.
ರಾಷ್ಟ್ರಪತಿ ಚುನಾವಣೆಯಲ್ಲಿ ಅಭ್ಯರ್ಥಿ ಗೆಲ್ಲಲು 5,43,000 ಮತಗಳ ಅಗತ್ಯವಿತ್ತು. ಆದರೆ ಮುರ್ಮು ಪರವಾಗಿ 6,76,803 ಮತ ಅಂದರೆ ಶೇ.64ರಷ್ಟು ಮತಗಳು ಚಲಾವಣೆಯಾಗಿದ್ದರೆ ಯಶವಂತ್ ಸಿನ್ಹಾ ಪರವಾಗಿ 3,80,177 ಮತಗಳು ಅಂದರೆ ಶೇ.35.97 ರಷ್ಟು ಮತಗಳು ಚಲಾವಣೆಯಾಗಿದೆ.
ಭಾರಿ ಪ್ರಮಾಣದಲ್ಲಿ ಅಡ್ಡಮತದಾನ
ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅಧಿಕೃತವಾಗಿ ಆಯ್ಕೆಯಾಗಿರುವುದು ನಿರೀಕ್ಷಿತವೇ ಸರಿ. ಆದರೂ, ರಾಷ್ಟ್ರಪತಿ ಚುನಾವಣೆಯಲ್ಲಿ ಭಾರಿ ಪ್ರಮಾಣದಲ್ಲಿ ಅಡ್ಡ ಮತದಾನ ನಡೆದಿರುವುದು ಗುರುವಾರ ನಡೆದ ಮತ ಎಣಿಕೆಯಲ್ಲಿ ಸಾಬೀತಾಗಿದೆ. ವಿವಿಧ ಪಕ್ಷಗಳಿಗೆ ಸೇರಿದ ಒಟ್ಟು 17 ಸಂಸದರು ಮತ್ತು 104 ಶಾಸಕರು ತಮ್ಮ ಪಕ್ಷಗಳು ಸೂಚಿಸಿದ್ದ ಅಭ್ಯರ್ಥಿಗೆ ಹೊರತಾಗಿ ಮತ್ತೊಂದು ಪಕ್ಷದ ಅಭ್ಯರ್ಥಿಗೆ ಮತ ಹಾಕಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
