ತೆಲುಗಿನ ಹೆಸರಾಂತ ಯುವ ನಟ ಶ್ರೀವಿಷ್ಣು ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಿತಿ ಗಂಭೀರವಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ದಿನಗಳಿಂದ ಅವರು ಜ್ವರದಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಸಾಮಾನ್ಯ ಜ್ವರ ಎಂದು ನೆಗ್ಲೆಟ್ ಮಾಡಿದ್ದರಿಂದ ಅವರು ಗಂಭೀರ ಸ್ಥಿತಿಗೆ ತಲುಪಿದ್ದಾರಂತೆ. ಸಾಮಾನ್ಯ ಜ್ವರದಿಂದ ಈಗವರಿಗೆ ಡೆಂಗ್ಯು ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಕೆಲವು ದಿನಗಳಿಂದ ಶ್ರೀವಿಷ್ಣು ಜ್ವರದಿಂದ ಬಳಲುತ್ತಿದ್ದರು. ಕಾಮನ್ ಆಗಿ ಬರುವ ಕೋಲ್ಡ್ ಎಂದುಕೊಂಡು ನಿರ್ಲಕ್ಷ್ಯ ಮಾಡಿದ್ದಾರೆ. ಜ್ವರ ಕಡಿಮೆ ಆಗದ ಕಾರಣ ಮನೆ ಬಳಿ ಇರುವ ವೈದ್ಯರನ್ನು ಸಂಪರ್ಕಮಾಡಿದ್ದಾರೆ. ಜ್ವರ ತೀವ್ರವಾದ ಕಾರಣ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ರೀವಿಷ್ಣು ರಕ್ತ ಪರೀಕ್ಷೆ ಮಾಡಿಸಿದಾಗ ಡೆಂಗ್ಯೂ ಆಗಿದೆ ಎಂದು ಖಾತ್ರಿಯಾಗಿದ್ದು ತಕ್ಷಣವೇ ಸಮೀಪ ಆಸ್ಪತ್ರೆಯಿಂದ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶ್ರೀವಿಷ್ಣು ‘ಅಲ್ಲೂರಿ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದು ಕೆಲವು ದಿನಗಳ ಹಿಂದೆ ಅಲ್ಲೂರಿ ಸೀತಾರಾಮರಾಜು ಜಯಂತಿಯಂದು ಸಿನಿಮಾದ ಟೀಸರ್ ಸಹ ಬಿಡುಗಡೆ ಮಾಡಿದ್ದರು. ಸಿನಿಮಾ ಬಿಡುಗಡೆ ಮಾಡುವ ಕಾರ್ಯದಲ್ಲಿ ನಿರತರಾಗಿದ್ದರು, ಈ ಸಮಯದಲ್ಲಿ ಅನಾರೋಗ್ಯ ಪೀಡಿತರಾಗಿ ಆಸ್ಪತ್ರೆ ಸೇರಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
