ಸಿಲಿಕಾನ್ ಸಿಟಿ ಬೆಂಗಳೂರು ಪ್ರತಿಯೊಂದು ವರ್ಗದ ಜನರ ವಾಸಸ್ಥಳವಾಗಿದೆ. ಹಲವಾರು ರಾಜ್ಯಗಳಿಂದ ಜನರು ಇಲ್ಲಿ ಬಂದು ವಾಸಿಸುತ್ತಾರೆ. ಹೀಗಾಗಿ ಬೆಂಗಳೂರು ನಗರ ಜನಪ್ರಸಿದ್ಧಿಯಾಗಿದೆ. ಆದರೆ ಇಷ್ಟೊಂದು ಪ್ರಸಿದ್ಧಿ ಗಳಿಸಿದ ನಗರಕ್ಕೆ ಇದೀಗ ಮಹಾ ಕಂಟಕ ಎದುರಾಗಿದೆ.
ಹೆಚ್ಚಿನ ಜನರು ಬೆಂಗಳೂರಿನಲ್ಲಿ ವಾಸಿಸುತ್ತಿರುವ ಕಾರಣ ಸಹಜವಾಗಿ ವಾಹನಗಳ ಪ್ರಮಾಣ ಹೆಚ್ಚಾಗಿರುತ್ತದೆ. ಹೀಗಾಗಿ ಇಷ್ಟು ದಿನ ವಾಯು ಮಾಲಿನ್ಯ ಕೊಂಚ ಕಡಿಮೆಯಿದ್ದ ಬೆಂಗಳೂರು ನಗರದಲ್ಲಿ ಇದೀಗ ಮತ್ತೆ ವಾಯು ಮಾಲಿನ್ಯ ಪ್ರಮಾಣ ಹೆಚ್ಚಾಗಿದೆ. ಕೆಎಸ್ಪಿಸಿಬಿ ಅಧ್ಯಯನದಲ್ಲಿ ಈ ಆಶ್ಚರ್ಯಕರ ಸಂಗತಿ ಬಯಲಾಗಿದೆ.
ವರದಿಯ ಪ್ರಕಾರ ನಗರದಲ್ಲಿ ವಾಯು ಮಾಲಿನ್ಯ ಹೆಚ್ಚಳಕ್ಕೆ ಪ್ರಮುಖ ಕಾರಣವೆಂದರೆ ಸಾರಿಗೆ ವ್ಯವಸ್ಥೆ, ಸಿಟಿಯ ಟ್ರಾಫಿಕ್ ಜಾಮ್, ಟ್ರಾಫಿಕ್ ಸಿಗ್ನಲ್, ರಸ್ತೆ ಕಾಮಗಾರಿ ವಿಲಂಬನೆ. ಈ ಹಿಂದೆ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದಾಗ ವಾಯು ಮಾಲಿನ್ಯ ಪ್ರಮಾಣ ಕಡಿಮೆಯಾಗಿತ್ತು. ಆದರೆ ಇದೀಗ ಮತ್ತೆ ನಗರ ಸಹಜ ಸ್ಥಿತಿಗೆ ಮರಳಿದ ಕಾರಣ ವಾಯು ಮಾಲಿನ್ಯ ಪ್ರಮಾಣ ಹೆಚ್ಚಾಗಿದೆ.
ಇನ್ನು ವಾಯು ಮಾಲಿನ್ಯ ಹೆಚ್ಚಳಕ್ಕೆ ಪ್ರಮುಖ ಕಾರಣ ಸಾರಿಗೆ ವ್ಯವಸ್ಥೆ. ಶೇಕಡಾ 63.5 ರಷ್ಟು ಮಾಲಿನ್ಯ ವಾಹನಗಳಿಂದ ಆಗುತ್ತಿದೆ. ಜೊತೆಗೆ ರಸ್ತೆ ಕಾಮಗಾರಿ, ಇಂಡಸ್ಟ್ರೀಸ್, ಹೋಟೆಲ್, ಟ್ರಾಫಿಕ್ ಸಿಗ್ನಲ್ನಿಂದ ಅಧಿಕ ವಾಯು ಮಾಲಿನ್ಯವಾಗುತ್ತಿದೆ. ಈ ಹಿನ್ನೆಲೆ ಸಾರಿಗೆ ಇಲಾಖೆ ಜತೆ ಚರ್ಚೆ ನಡೆಸಿ, ಎಲೆಕ್ಟ್ರಿಕಲ್ ಬಸ್ ಖರೀದಿಗೆ ಮನವಿ ಮಾಡುವ ಸಾಧ್ಯತೆಯಿದೆ. ಹೀಗಾಗಲೇ ನಗರದಲ್ಲಿ ಎಲೆಕ್ಟ್ರಿಕ್ ಬಸ್ ಗಳ ಸಂಚಾರ ಶುರುವಾಗಿದ್ದು, ವಾಯು ಮಾಲಿನ್ಯವನ್ನು ತಡೆಯಲು ಮತ್ತಷ್ಟು ಎಲೆಕ್ಟ್ರಿಕ್ ವಾಹನಗಳ ಬಳಕೆಯ ಕುರಿತು ಸರ್ಕಾರ ಚಿಂತಿಸಬೇಕು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
