“ಬಿಗ್ ಬಾಸ್”, “ಲಕ್ಷ್ಮಿ ಬಾರಮ್ಮ” ಖ್ಯಾತಿಯ ಚಂದನ್ ಅವರ ಮೇಲೆ ತೆಲುಗು ಧಾರಾವಾಹಿ ತಂಡದಿಂದ ಹಲ್ಲೆ ನಡೆದಿದ್ದು, ಇದೀಗ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತೆಲುಗು ಧಾರಾವಾಹಿಯ ಶೂಟಿಂಗ್ ಸೆಟ್ ನಲ್ಲಿ ನಡೆದ ಗಲಾಟೆಯ ವಿಡಿಯೋ ಇದೀಗ ಎಲ್ಲಾ ಕಡೆ ಸಕತ್ ವೈರಲ್ ಆಗುತ್ತಿದೆ.
ಕನ್ನಡ ಕಿರುತರೆ ದಾರಾವಾಹಿಗಳಲ್ಲದೆ, ಇತರೆ ಭಾಷೆಯ ಧಾರಾವಾಹಿಗಳಲ್ಲಿ ಚಂದನ್ ನಟಿಸಿದ್ದಾರೆ. ಇತ್ತೀಚಿಗೆ ಅವರು ತೆಲುಗಿನ ‘ಸಾವಿತ್ರಮ್ಮ ಗಾರಿ ಅಬ್ಬಾಯಿ’ ಧಾರಾವಾಹಿಯಲ್ಲಿ ಭಾಗಿಯಾಗಿದ್ದರು. ಈ ಧಾರಾವಾಹಿಯ ಶೂಟಿಂಗ್ ನಡೆಯ್ತುತ್ತಿರುವ ವೇಳೆ ಚಂದನ್ ಸೀರಿಯಲ್ ತಂತ್ರಜ್ಞರ ಜೊತೆ ಕಿರಿಕ್ ಮಾಡಿಕೊಂಡಿದ್ದ ಕಾರಣ ಅವರ ಮೇಲೆ ಶೂಟಿಂಗ್ ತಂಡದಿಂದ ಹಲ್ಲೆ ಯಾಗಿದೆ. ಘಟನೆ ನಡೆದು ಕೆಲವು ದಿನಗಳ ಬಳಿಕ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಆದರೆ ಇವರ ಮೇಲೆ ಏತಕ್ಕಾಗಿ ಹಲ್ಲೆ ನಡೆಯಿತು ಎಂಬುದರ ಕುರಿತು ಅಧಿಕೃತ ಮಾಹಿತಿ ಇಲ್ಲ. ಕೆಲವರ ಪ್ರಕಾರ ಚಂದನ್ ಅವರಿಂದ ಕ್ಯಾಮೆರಾಮ್ಯಾನ್ ಮೇಲೆ ಹಲ್ಲೆ ನಡೆಯಿತು. ಆ ಕಾರಣದಿಂದಲೇ ತಂತ್ರಜ್ಞರು ಚಂದನ್ ವಿರುದ್ಧ ತಿರುಗಿ ಬಿದ್ದರು ಎಂದು ಹೇಳಲಾಗುತ್ತಿದೆ. ಇದಾದ ನಂತರ ಚಂದನ್ ಅವರ ಬಳಿ ಕ್ಷಮೆ ಕೇಳಿದರು ಸಹ ಅಲ್ಲಿದವರಲ್ಲಿ ಯಾರು ಕೂಡ ಸಮಾಧಾನ ಗೊಂಡಂತೆ ಕಾಣುತ್ತಿರಲಿಲ್ಲ. ಈ ಘಟನೆ ನಡೆದಿದ್ದು ಸುಮಾರು ಒಂದು ತಿಂಗಳ ಹಿಂದೆ. ಆದರೆ ಸುಮಾರು ಒಂದು ತಿಂಗಳ ನಂತರ ಈ ಸುದ್ದಿ ಇದೀಗ ಸಕತ್ ವೈರಲ್ ಆಗುತ್ತಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
