fbpx
ಸಮಾಚಾರ

“ಮತ್ತೆ ಬೇಕು ಅಂದ್ರೆ ಸಿಗಲ್ಲ, ‘ಲಕ್ಕಿಮ್ಯಾನ್’ ಚಿತ್ರವನ್ನು ಎಲ್ಲರೂ ಅಪ್ಪಿಕೊಂಡು ಅನುಭವಿಸಿ” ಅಪ್ಪು ನೆನೆದು ಸುದೀಪ್ ಭಾವುಕ ಮಾತು

ಕನ್ನಡಿಗರ ಪ್ರೀತಿಯ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ದೈಹಿಕವಾಗಿ ನಮ್ಮಿಂದ ದೂರವಾಗಿ ಬರೋಬ್ಬರಿ ಹತ್ತು ತಿಂಗಳು ಘಟಿಸಿವೆ. ಫಿಟ್ ಅಂಡ್ ಫೈನ್ ಆಗಿದ್ದ ಅಪ್ಪು ಇದ್ದಕ್ಕಿಂತ ನಿಧನ ಹೊಂದಿದ ವಿಚಾರ ಈಗಲೂ ಕನ್ನಡಿಗರಿಗೆ ಅರಗಿಸಿಕೊಳ್ಳಲು ಆಗದ ಸಂಗತಿ. ಅಪ್ಪು ಆಗಲಿ 10 ತಿಂಗಳೇ ಕಳೆದಿದ್ದರೂ ಅದರಿಂದ ಕನ್ನಡಿಗರ ಮನಸ್ಸಿಗೆ ಆಗಿರುವ ನೋವಿನ ಪ್ರಮಾಣ ಕಡಿಮೆಯಾಗಿಲ್ಲ.

ಪುನೀತ್‌ ರಾಜ್‌ಕುಮಾರ್ ಅವರು ಜೇಮ್ಸ್ ಚಿತ್ರದಲ್ಲಿ ನಾಯಕನಾಗಿ ನಟಿಸಿದ ಕೊನೆಯ ಸಿನಿಮಾ.. ಜೊತೆಗೆ ಡಾರ್ಲಿಂಗ್ ಕೃಷ್ಣ ಹೀರೋ ಆಗಿ ನಟಿಸಿರುವ ‘ಲಕ್ಕಿ ಮ್ಯಾನ್’ ಚಿತ್ರದಲ್ಲಿ ಅಪ್ಪು ವಿಶೇಷ ಪಾತ್ರ ಮಾಡಿದ್ದರು. ಈಗ ಆ ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು ನೆನ್ನೆ ಚಿತ್ರದ ಆಡಿಯೋ ಸಮಾರಂಭ ನಡೆಯಿತು. ಈ ಆಡಿಯೋ ರಿಲೀಸ್ ಕಾರ್ಯಕ್ರಮಕ್ಕೆ ನಟ ರಾಘವೇಂದ್ರ ರಾಜ್​ ಕುಮಾರ್​, ನಟ ಕಿಚ್ಚ ಸುದೀಪ್​ ಹಾಗೂ ಡ್ಯಾನ್ಸರ್​ ಪ್ರಭುದೇವ್ ಅವರು ಭಾಗಿಯಾಗಿದ್ರು.

ವೇದಿಕೆ ಮೇಲೆ ಮಾತನಾಡಿದ ಸುದೀಪ ಅವರು ಪುನೀತ್​ ಬಗ್ಗೆ ಭಾವುಕ ನುಡಿಗಳನ್ನು ಹಂಚಿಕೊಂಡರು. ‘ಈ ಸಿನಿಮಾ ರಿಲೀಸ್​ ಆದಾಗ ಎಲ್ಲರೂ ಎರಡೂ ಕೈಗಳನ್ನು ಚಾಚಿ ತಬ್ಬಿಕೊಂಡು ನೋಡಿ. ಯಾಕೆಂದರೆ, ಮತ್ತೆ ಬೇಕು ಎಂದರೂ ಕೂಡ ಇದು ಸಿಗಲ್ಲ. ಇರುವಾಗ ನಾವು ಬೆಲೆ ಕೊಡುತ್ತೇವೆ. ಕಳೆದುಕೊಂಡ ನಂತರ ಅದಕ್ಕೆ ಇನ್ನೂ ಜಾಸ್ತಿ ಬೆಲೆ ಕೊಡುತ್ತೇವೆ. ಅದೊಂದು ನಂಬಿಕೆ. ಅವರು ಬದುಕಿದ ರೀತಿಯೇ ಆಗಿತ್ತು. ಆದರೆ ಟ್ರೇಲರ್​ ನೋಡುವಾಗ ನಾನು ಸ್ಮೈಲ್​ ಮಾಡುತ್ತಿದ್ದೆ. ಯಾಕೆಂದರೆ ಅವರಿಗೆ ಈ ಸಿನಿಮಾ ಹೆಚ್ಚು ಹೊಂದಿಕೆ ಆಗುತ್ತಿದೆ. ಎಲ್ಲರೂ ಈ ಸಿನಿಮಾವನ್ನು ತಬ್ಬಿಕೊಂಡು ಅನುಭವಿಸಿ’ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ.

ಬಹುನಿರೀಕ್ಷಿತ ‘ಲಕ್ಕಿಮ್ಯಾನ್’ ಈಗಾಗಲೇ ದಾಖಲೆಗಳನ್ನು ಬರೆಯಲು ಶುರು ಮಾಡಿದೆ. ಭಾರೀ ಮೊತ್ತಕ್ಕೆ ಚಿತ್ರದ ವಿತರಣೆ ಹಕ್ಕು ಮಾರಾಟವಾಗಿದೆ. ಸೆಪ್ಟೆಂಬರ್ 9ಕ್ಕೆ ಚಿತ್ರವನ್ನು ದೊಡ್ಡಮಟ್ಟದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೀತಿದ್ದು, ಸಿನಿರಸಿಕರು ಕಾತರದಿಂದ ಕಾಯುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top