fbpx
ಸಮಾಚಾರ

ಸ್ಯಾಂಡಲ್ ವುಡ್ ಗೂ ಹಬ್ಬಿತು #Boycott ಗಾಳಿ! ಶಾಸಕ ಜಮೀರ್ ಪುತ್ರ ಝೈದ್ ಖಾನ್ ‘ಬನಾರಸ್’ ಚಿತ್ರಕ್ಕೆ ಬಾರಿ ವಿರೋಧ

ಬಾಲಿವುಡ್ ಸಿನಿಮಾಗಳಲ್ಲಿ ವ್ಯಾಪಕವಾಗಿ ಟ್ರೆಂಡ್ ಶ್ರುಷ್ಟಿಮಾಡುತ್ತಿದ್ದ ವಿಷಯ ಎಂದರೆ ಅದು #Boycott. ಇದೀಗ ಈ ಟ್ರೆಂಡ್ ಬಾಲಿವುಡ್ ಮಾತ್ರವಲ್ಲದೆ ಸ್ಯಾಂಡಲ್ವುಡ್ ಕೂಡ ಹಬ್ಬಿದೆ. ಇದರ ಮೊದಲ ಹೊಡೆತ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಅವರ ಮೊದಲ ಚಿತ್ರಕ್ಕೆ ಬಿದ್ದಿದೆ.

ಚಾಮರಾಜಪೇಟೆ ಮೈದಾನದ ವಿಚಾರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಹಿರಂಗವಾಗಿ ಮಾತನಾಡಿ ಹಲವಾರು ಟೀಕೆಗೆ ಗುರಿಯಾಗಿದ್ದರು. ಇದೀಗ ಮತ್ತೆ ಇವರು ಸುದ್ದಿಯಾಗುತ್ತಿದ್ದಾರೆ. ಅದು ಕೂಡ ಇವರ ಮಗನ ಕುರಿತು.

ಶಾಸಕ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಬನಾರಸ್ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಇದು ಝೈದ್ ಖಾನ್ ಅವರ ಮೊದಲ ಸಿನಿಮಾ. ಹೀಗಾಗಿ ಸಹಜವಾಗಿ ಇವರಿಗೆ ಈ ಸಿನಿಮಾದ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳಿರುತ್ತದೆ. ಆದರೆ ಇದೀಗ ಇವೆಲ್ಲ ನಿರೀಕ್ಷೆಗಳು ಈಡೇರದೆ ಇರುವ ಸ್ಥಿತಿ ಎದುರಾಗಿದೆ.

ಬನಾರಸ್ ಚಿತ್ರದ ವಿರುದ್ಧ ಹಿಂದೂಪರ ಸಂಘಟನೆಗಳು ಇದೀಗ #boycottBanaras ಟ್ರೆಂಡ್ ಆರಂಭಿಸಿದ್ದು, ಚಿತ್ರ ಹಿಂದೂ ವಿರೋಧಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಗಣೇಶ ಹಬ್ಬಕ್ಕೆ ಶುಭ ಕೋರುವ ಶಾಸಕರು, ಅತ್ತ ದೆಹಲಿಯಲ್ಲಿ ಖ್ಯಾತ ಕಪಿಲ್ ಸಿಬಲ್ ರನ್ನು ಭೇಟಿ ಮಾಡಿ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ನಡೆಸದಂತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದಲ್ಲದೆ ಇತ್ತೀಚೆಗೆ ಬನಾರಸ್ ಚಿತ್ರತಂಡ ಬಿಡುಗಡೆ ಮಾಡಿದ್ದ ಪೋಸ್ಟರ್ ಮತ್ತು ಚಿತ್ರಗಳಲ್ಲೂ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಲಾಗಿದೆ.

ಇವೆಲ್ಲ ಕಾರಣಗಳನ್ನು ಇಟ್ಟುಕೊಂಡು ಹಿಂದೂಪರ ಸಂಘಟನೆಗಳು ಬನಾರಸ್ ಸಿನಿಮಾವನ್ನು ಬಿಡುಗಡೆಮಾಡಬಾರದು ಎಂದು ಆಗ್ರಹಿಸುತ್ತಿದ್ದಾರೆ. ಅಂದಹಾಗೆ ಜಯತೀರ್ಥ ನಿರ್ದೇಶನದ ಬನಾರಸ್ ಚಿತ್ರ ಇದೇ ಸೆಪ್ಟೆಂಬರ್ 4ರಂದು ಕನ್ನಡ, ತೆಲುಗು, ಹಿಂದಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಒಂದು ವೇಳೆ ಈ ಸಿನಿಮಾ ಬಿಡುಗಡೆಯಾಗದಿದ್ದರೆ ಶಾಸಕ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಅವರ ವೃತಿ ಜೀವನಕ್ಕೆ ಒಂದು ದೊಡ್ಡ ಹೊಡೆತ ಬಿದ್ದಂತೆ ಆಗುವುದು ಪಕ್ಕ ಎಂದು ಹೇಳಬಹುದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top