ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ನಟ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ. ಈ ಕುರಿತಾಗಿ ಪಶು ಸಂಗೋಪನೆ ಸಚಿವ ಪ್ರಭು ಬಿ. ಚವ್ಹಾಣ್ ನಟ ಕಿಚ್ಚ ಸುದೀಪ್ಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಸುದೀಪ್ ಅವರು ಯಾವುದೇ ಸಂಭಾವನೇ ಇಲ್ಲದೆ ಈ ಕೆಲಸ ನಿರ್ವಹಿಸುವುದಾಗಿ ಒಪ್ಪಿಕೊಂಡಿದ್ದಾರೆಂದು ಸಚಿವ ಪ್ರಭು ಬಿ. ಚವ್ಹಾಣ್ ಮಾಹಿತಿ ಹಂಚಿಕೊಂಡಿದ್ದಾರೆ.
ಗೋಶಾಲೆಯಲ್ಲಿ ರಕ್ಷಿಸಲ್ಪಟ್ಟ ಅನಾಥ ಗೋವುಗಳ ಪಾಲನೆ – ಪೋಷಣೆಗೆ ನೆರವಾಗುವ ನಿಟ್ಟಿನಲ್ಲಿ ಜಾರಿಮಾಡಲಾದ ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ "ಪುಣ್ಯಕೋಟಿ ಯೋಜನೆ"ಯ ರಾಯಭಾರಿಯಾದ ಸುಪ್ರಸಿದ್ಧ ನಟ, ಅಭಿನಯ ಚಕ್ರವರ್ತಿ ಶ್ರೀ ಕಿಚ್ಚ ಸುದೀಪ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. pic.twitter.com/uNkHetZOrV
— Prabhu Bhamla Chavan (@PrabhuChavanBJP) September 2, 2022
ಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಿ, ಹೈನುಗಾರಿಕೆಗೆ ಉತ್ತೇಜನ ನೀಡಿ, ಜಾನುವಾರುಗಳ ಸಂರಕ್ಷಣೆ, ಪಾಲನೆ, ಪೋಷಣೆ ಮಾಡುತ್ತಿರುವ ಸರ್ಕಾರದೊಂದಿಗೆ ಕೈಜೋಡಿಸಿ, ಸಾರ್ವಜನಿಕರಲ್ಲಿ ಸ್ಫೂರ್ತಿ ತುಂಬಲು ತಮ್ಮನ್ನು ತಮ್ಮ ಜನ್ಮದಿನದ ಈ ಶುಭ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ.
ಅಂದಹಾಗೆ ರಾಜ್ಯ ಸರ್ಕಾರವು ಜುಲೈ 28ರಿಂದ ಪುಣ್ಯಕೋಟಿ ದತ್ತು ಯೋಜನೆಯನ್ನು ಜಾರಿಗೆ ತಂದಿದೆ. ಪುಣ್ಯಕೋಟಿ ದತ್ತು ಯೋಜನೆಯ ಮೂಲಕ ಗೋ ಸಂತತಿಯನ್ನು ಕಾಪಾಡುವ ಹೊಣೆಯನ್ನು ಕರ್ನಾಟಕ ಸರ್ಕಾರ ಹೊತ್ತಿದೆ. ಗೋಶಾಲೆಗಳಲ್ಲಿನ ಗೋವುಗಳ ದತ್ತು ಪಡೆಯಲು ಮೊದಲ ಬಾರಿಗೆ ಪುಣ್ಯಕೋಟಿ ದತ್ತು ಯೋಜನೆಗೆ ಚಾಲನೆ ನೀಡಲಾಗಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
