fbpx
ಸಮಾಚಾರ

ಮಹಿಳೆಯರ ಸಂಭಾಷಣೆಯಲ್ಲಿ ಕೇಳಿಬಂದ ಲೈಂಗಿಕ ಆರೋಪ: ಮಡಿವಾಳೇಶ್ವರ ಮಠದ ಬಸವಸಿದ್ಧಲಿಂಗ ಸ್ವಾಮೀಜಿ ಆತ್ಮಹತ್ಯೆ

ಬೈಲಹೊಂಗಲ ತಾಲ್ಲೂಕಿನ ನೇಗಿನಹಾಳದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೈಲಹೊಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ವಾಮೀಜಿ ಆತ್ಮಹತ್ಯೆ ಸುದ್ದಿ ತಿಳಿದ ಕೂಡಲೇ ನೂರಾರು ಭಕ್ತರು ಮಠಕ್ಕೆ ದೌಡಾಯಿಸಿದ್ದಾರೆ.

ಎಂದಿನಂತೆ ಸೋಮವಾರ ಬೆಳಿಗ್ಗೆ ಅವರ ಸೇವಕ ಶ್ರೀಗಳನ್ನು ನಿದ್ದೆಯಿಂದ ಎಬ್ಬಿಸಲು ಹೋದರು. ಮಲಗುವ ಕೋಣೆಯ ಬಾಗಿಲಿಗೆ ಒಳಗಡೆಯಿಂದ ಚಿಲಕ ಹಾಕಲಾಗಿತ್ತು. ಎಷ್ಟು ಹೊತ್ತು ಕೂಗಿದರೂ ಸ್ವಾಮೀಜಿ ಓಗೊಡಲಿಲ್ಲ. ಬಳಿಕ ಕಿಟಕಿಯನ್ನು ತಳ್ಳಿ ಇಣುಕಿದಾಗ ಅವರು ನೇಣು ಹಾಕಿಕೊಂಡಿದ್ದು ಗೊತ್ತಾಗಿದೆ.

ಮುರುಘಾ ಮಠದ ಶಿವಾಚಾರ್ಯ ಅವರ ಮೇಲಿನ ಅತ್ಯಾಚಾರ ಆರೋಪದ ಕುರಿತು ಇಬ್ಬರು ಮಹಿಳೆಯರು ಮಾತನಾಡುತ್ತಿದ್ದರು. ರಾಜ್ಯದ ಹಲವು ಮಠಾಧೀಶರು ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಒಂದು ಮಹಿಳೆ ಸಂಭಾಷಣೆಯಲ್ಲಿ ಆರೋಪಿಸುತ್ತಾರೆ. ಆ ಸಂಭಾಷಣೆಯ ನಡುವೆ ಬಸವಸಿದ್ಧಲಿಂಗ ಸ್ವಾಮಿಯವರ ಹೆಸರನ್ನು ಮಹಿಳೆ ಉಲ್ಲೆಖಿಸುತ್ತಾಳೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಕಾರಣದಿಂದಲೇ ಶ್ರೀಗಳು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಆದರೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top