fbpx
ಸಮಾಚಾರ

ಸಚಿವ ಉಮೇಶ್ ಕತ್ತಿ ನಿಧನದ ಹಿನ್ನೆಲೆ ಇಂದು ಶಾಲಾ-ಕಾಲೇಜು ಮತ್ತು ಕಚೇರಿಗಳಿಗೆ ರಜೆ!

ನೆನ್ನೆ (ಸೆಪ್ಟೆಂಬರ್ 6 ) ರಾತ್ರಿ ಆಹಾರ ಇಲಾಖೆ ಸಚಿವರಾಗಿರುವ ಉಮೇಶ್ ಕತ್ತಿ ಅವರು ಹೃದಯಾಘಾತದಿಂದ ನಿಧನರಾದರು. ಇವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಇವರ ಹುಟ್ಟೂರು ಬೆಳಗಾವಿಯಲ್ಲಿ ನೀರವ ಮೌನ ತುಂಬಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿ ಬೆಳಗಾವಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಮತ್ತು ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಿದ್ದಾರೆ.

ಉಮೇಶ್ ಕತ್ತಿ ನಿಧನದ ವಿಷಯ ತಿಳಿಯುತ್ತಿದ್ದಂತೆ ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದರು. ನಂತರ ಮಾಧ್ಯಮದ ಮುಂದೆ ಮಾತನಾಡುತ್ತಿದ್ದ ವೇಳೆ ಇವರು ಭಾವುಕರಾಗಿ ತಾನು ಒಬ್ಬ ಸಹೋದರನನ್ನು ಕಳೆದುಕೊಂಡಿದ್ದೇನೆ ಎಂದು ಬಿಕ್ಕಿ-ಬಿಕ್ಕಿ ಅತ್ತಿದ್ದಾರೆ. ಬಳಿಕ ಇವರಿಬ್ಬರ ಒಡನಾಟದ ಬಗ್ಗೆ ಸಹ ಮಾಧ್ಯಮದ ಮುಂದೆ ಮಾತನಾಡಿದ್ದಾರೆ. ಇದಾದ ಬಳಿಕ ಕತ್ತಿ ನಿಧನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಕೈಗೊಳ್ಳಲಾಗಿದ್ದು, ಇಂದು ಬೆಳಗಾವಿ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಿಗೆ, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದರು.

ಬೆಳಿಗ್ಗೆ 7 ಗಂಟೆಗೆ ಪಾರ್ಥಿವ ಶರೀರವನ್ನು ಎಚ್‌ಎಎಲ್‌ನಿಂದ ಬೆಳಗಾವಿಗೆ ಏರ್‌ಲಿಫ್ಟ್‌ ಮಾಡಲು ನಿರ್ಧರಿಸಲಾಗಿದೆ. ಸಂಜೆ 5 ಗಂಟೆಯವರೆಗೂ ಬೆಲ್ಲದ ಬಾಗೇವಾಡಿಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಇದಾದ ಬಳಿಕ ಸರ್ಕಾರಿ ಗೌರವದೊಂದಿಗೆ ಇಂದು ಸಂಜೆ ಅವರ ಸ್ವಗ್ರಾಮ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top