fbpx
ಸಮಾಚಾರ

ಹೃದಯಾಘಾತದಿಂದಲೇ ನಿಧನರಾಗಿದ್ದ ಉಮೇಶ್ ಕತ್ತಿ ತಂದೆ: ಸದನದಲ್ಲೇ ಹೃದಯಘಾತವಾಗಿತ್ತು

ಆಹಾರ ಮತ್ತು ಅರಣ್ಯ ಸಚಿವರಾಗಿದ್ದ ಉಮೇಶ್ ಕತ್ತಿ ಅವರು ಮಂಗಳವಾರ (ಸಪ್ಟೆಂಬರ್ 6)ಸಂಜೆ ನಿಧನರಾದರು. ಹೃದಯ ಸ್ತಂಭನದಿಂದ ಆಸ್ಪತ್ರೆ ಸೇರಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಉಮೇಶ್ ಕತ್ತಿ ಅವರ ತಂದೆ ವಿಶ್ವನಾಥ್ ಕತ್ತಿ ಅವರು ಸದನದಲ್ಲೇ ಹೃದಯಾಘಾತದಿಂದ ನಿಧನರಾಗಿದ್ದರು ಎಂಬುದು ಅಚ್ಚರಿಯ ಸಂಗತಿ.

ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದ ಸಂಧರ್ಭದಲ್ಲಿ ವಿಶ್ವನಾಥ್ ಕತ್ತಿ ಜನತಾ ಪಕ್ಷದ ಶಾಸಕರಾಗಿದ್ದರು. ಈ ವೇಳೆ 1984 ಸಮಯದಲ್ಲಿ ಶಾಸಕರಾಗಿದ್ದ ಇವರು ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಸಂಧರ್ಭದಲ್ಲಿ ಸದನದಲ್ಲಿ ಭಾಷಣ ಮಾಡುತ್ತಿದ್ದರು. ಆದರೆ ಭಾಷಣ ಮಾಡುತ್ತಿದ್ದ ವೇಳೆ ಇವರಿಗೆ ಹಠಾತ್ ಹೃದಯಾಘಾತವಾಗಿದ್ದು, ಸದನದಲ್ಲೇ ತಮ್ಮ ಕೊನೆಯುಸಿರು ಎಳೆದಿದ್ದಾರೆ.

ಸದನದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ವಿಶ್ವನಾಥ್ ಕತ್ತಿ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅಲ್ಲಿ ಇದ್ದ ಸಚಿವರು ಮತ್ತು ವೈದ್ಯರಾದ ಡಾ.ಜೀವರಾಜ ಆಳ್ವ ಪ್ರಾರ್ಥಮಿಕ ಚಿಕಿತ್ಸೆ ನೀಡಿದರು ಅವರು ಬದುಕುಳಿಯಲಿಲ್ಲ. ಹೀಗಾಗಿ ಸದನದ ಇತಿಹಾಸದಲ್ಲೇ ಶಾಸಕರಾಗಿ ಸದನದಲ್ಲಿ ಮೃತಪಟ್ಟ ಮೊದಲ ವ್ಯಕ್ತಿ ಎಂದರೆ ಅದು ವಿಶ್ವನಾಥ್ ಕತ್ತಿ ಅವರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top