ಬಾಲಿವುಡ್ ಸಿನಿಮಾಗಳಿಗೆ ಸಂಕಷ್ಟಗಳು ಒಂದರಮೇಲೊಂದರಂತೆ ಬರುತ್ತಿದೆ. ಅದರಲ್ಲೂ ಹೆಚ್ಚಾಗಿ ಬಾಯ್ಕಾಟ್ ಅಥವಾ ಸಿನಿಮಾ ಬ್ಯಾನ್ ಮಾಡಿ ಎಂದು ಜನ ಹೇಳುತ್ತಿದ್ದಾರೆ. ಇದೀಗ ಅಜಯ್ ದೇವಗನ್ ನಟನೆಯ ‘ಥ್ಯಾಂಕ್ ಗಾಡ್’ ಸಿನಿಮಾಕ್ಕೆ ಬಾಯ್ಕಾಟ್ ಅಥವಾ ಬ್ಯಾನ್ ಬಿಸಿ ತಟ್ಟುವ ಎಲ್ಲಾ ಸಾಧ್ಯತೆಗಳಿವೆ.
ಇತ್ತೀಚಿಗೆ ‘ಥ್ಯಾಂಕ್ ಗಾಡ್’ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿತ್ತು. ಈ ಚಿತ್ರದಲ್ಲಿ ಅಜಯ್ ದೇವಗನ್ ಮತ್ತು ಸಿದ್ದಾರ್ಥ್ ಮಲ್ಹೋತ್ರಾ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಹಿಂದೂಗಳ ಭಾವನೆಗೆ ದಕ್ಕೆ ತರುವಂತಹ ವಿಚಾರಗಳು ಕಂಡುಬಂದಿದ್ದು, ಮತ್ತು ಇದರಲ್ಲಿ ಹಿಂದೂ ದೇವರನ್ನು ಆಕ್ಷೇಪಾರ್ಹ ರೀತಿಯಲ್ಲಿ ತೋರಿಸಿರುವ ಕಾರಣ ಈ ಸಿನಿಮಾವನ್ನು ಬ್ಯಾನ್ ಮಾಡಬೇಕೆಂದು ಮಧ್ಯಪ್ರದೇಶದ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಮಧ್ಯಪ್ರದೇಶದ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಅವರು ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರಿಗೆ ‘ಥ್ಯಾಂಕ್ ಗಾಡ್’ ಸಿನಿಮಾದಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಆಗಲಿದೆ. ಆದುದರಿಂದ ಈ ಸಿನಿಮಾವನ್ನು ಬ್ಯಾನ್ ಮಾಡಬೇಕೆಂದು ಪತ್ರ ಬರೆದಿದ್ದಾರೆ.
ಟ್ರೈಲರ್ ನೋಡಿದ ಪ್ರತಿಯೊಬ್ಬರೂ ಸಕಾರಾತ್ಮಕವಾಗಿ ಪ್ರತಿಕ್ರಯಿಸುತ್ತಿದ್ದಾರೆ. ಆದರೆ ಶಿಕ್ಷ ಸಚಿವರಿಗೆ ಇದರಲ್ಲಿ ಏನು ತಪ್ಪು ಸಿಕ್ಕಿದೆ ಎಂದು ಜನರಿಗೆ ಅರ್ಥವಾಗುತ್ತಿಲ್ಲ. ಹೀಗಾಗಿ ಈ ಚಿತ್ರ ಇದೀಗ ಎಲ್ಲಿಗೆ ತಲುಪುತ್ತದೆ ಎಂದು ಕಾದು ನೋಡಬೇಕು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
