ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೂ ಮುನ್ನ ಪುರುಷರು ಅಂಗಿ-ಬನಿಯನ್ ಕಳಚಿಡುವ ಸಂಪ್ರದಾಯ ಹಲವು ದೇವಾಲಯಗಳಲ್ಲಿ ರೂಡಿಯಲ್ಲಿದ್ದು ಇದೀಗ ಈ ಸಂಪ್ರದಾಯದ ವಿರುದ್ಧ ದೂರು ದಾಖಲಾಗಿದೆ. ನಿಯಮವನ್ನು ಬದಲಿಸಲು ಮಂಗಳೂರು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟವು ಮನವಿ ಮಾಡಿದೆ.
ಅಂಗಿ-ಬನಿಯನ್ ಕಳಚಿಟ್ಟು ದೇವರ ದರ್ಶನ ಪಡೆಯುವ ಪದ್ಧತಿ ಸರಿಯಲ್ಲ. ಸರ್ಕಾರದ ಆದೇಶ ಮತ್ತು ಹಿಂದೂ ಸಂಪ್ರದಾಯದಲ್ಲಿ ಈ ಪದ್ಧತಿ ಇಲ್ಲ. ಈ ಆಚರಣೆ ಮೂಲಕ ಭಕ್ತರಲ್ಲಿ ಗೊಂದಲ ಸೃಷ್ಟಿಸಲಾಗುತ್ತಿದೆ. ಚರ್ಮ ರೋಗವಿದ್ದವರು ಅಂಗಿ ಕಳಚಿ ಸಾಗುವುದರಿಂದ ಬೇರೆಯವರಿಗೆ ಹರಡೋ ಸಾಧ್ಯತೆ ಇದೆ. ಅಂಗವೈಕಲ್ಯ ಇದ್ದವರಿಗೆ ಬಟ್ಟೆ ಕಳಚಿ ದರ್ಶನ ಪಡೆಯುವುದು ನೋವು ತರಬಹುದು. ಇದು ಭಾರತದ ಸಾಂವಿಧಾನಿಕ ಮೂಲಭೂತ ಹಕ್ಕಿನ ಸ್ಪಷ್ಟ ಉಲ್ಲಂಘನೆ. . ಹೀಗಾಗಿ ತಕ್ಷಣ ದೇವಸ್ಥಾನಗಳಲ್ಲಿ ಅಳವಡಿಸಿರುವ ಫಲಕ ತೆರವುಗೊಳಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.
‘ಹಿಂದೂ ಧರ್ಮದ ಯಾವುದೇ ಧರ್ಮಗ್ರಂಥಗಳಲ್ಲಿ ಇಂಥ ನಿಯಮಗಳ ಉಲ್ಲೇಖ ಇಲ್ಲ. ಈ ಕುರಿತು ಯಾವುದೇ ಸರ್ಕಾರಿ ಆದೇಶವೂ ಪ್ರಕಟವಾಗಿಲ್ಲ. ಆದರೂ ಯಾತ್ರಿಗಳಿಗೆ ಮುಜುಗರ ಆಗುವ ಇಂಥ ನಿಯಮಗಳು ಹಲವು ವರ್ಷಗಳಿಂದ ಜಾರಿಯಲ್ಲಿರುವುದು ಏಕೆ’ ಎಂದು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
