ದಕ್ಷಿಣ ಭಾರತದ ಖ್ಯಾತ ನಟಿ, ಕನ್ನಡತಿ ಮತ್ತು ನ್ಯಾಷನಲ್ ಕ್ರಶ್ ಎಂದೇ ಪ್ರಖ್ಯಾತರಾಗಿರುವ ರಶ್ಮಿಕಾ ಮಂದಣ್ಣ ಇದೀಗ ಆಸ್ಪತ್ರೆ ಸೇರಿದ್ದಾರೆ. ಈ ಕುರಿತು ಇವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರೇ ಬಹಿರಂಗವಾಗಿ ತಿಳಿಸಿದ್ದಾರೆ. ಹೀಗಾಗಿ ತಮ್ಮ ನೆಚ್ಚಿನ ನಟಿಗೆ ಏನಾಗಿದೆ ಎಂದು ಅಭಿಮಾನಿಗಳು ಬಹಳಷ್ಟು ಆತಂಕಪಟ್ಟಿದ್ದಾರೆ.
ಇತ್ತೀಚಿಗೆ ರಶ್ಮಿಕಾ ಬಹಳಷ್ಟು ಸಿನಿಮಾಗಳಲ್ಲಿ ಸಕತ್ ಬ್ಯುಸಿಯಾಗಿದ್ದರು. ಹೀಗಾಗಿ ಇವರು ಮೊಣಕಾಲಿನ ನೋವಿನಿಂದ ಬಳಲುತ್ತಿದ್ದರು. ಇದರ ಪರಿಣಾಮವಾಗಿ ಇವರು ಹೈದರಾಬಾದ್ ನ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರ್ಥೋ ಸ್ಪೆಷಲಿಸ್ಟ್ ಗುರುವಾ ರೆಡ್ಡಿ ರಶ್ಮಿಕಾ ಮಂದಣ್ಣ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಈ ಕುರಿತು ಪೋಸ್ಟ್ ಮಾಡಿರುವ ಇವರು ‘ಸಾಮಿ ಸಾಮಿ ಅಂತ ಮೊಣಕಾಲಿಗೆ ಭಾರ ಹಾಕಿ ಡಾನ್ಸ್ ಮಾಡಿದ್ದೀರಿ. ಅದಕ್ಕಾಗಿ ಈ ನೋವು ಬಂದಿದೆ’ ಎಂದು ತಮಾಷೆಯಾಗಿ ರಶ್ಮಿಕಾ ಅವರ ಕಾಲು ಎಳೆದಿದ್ದಾರೆ.
ರಶ್ಮಿಕಾ ಅವರಿಗೆ ಚಿಕಿತ್ಸೆ ನೀಡಿರುವ ವೈದ್ಯರು ” ಮೊಣಕಾಲು ನೋವು ಅತಿಯಾದ ಕಾರಣ ಚಿಕಿತ್ಸೆಗಾಗಿ ಇವರು ನಮ್ಮ ಬಳಿ ಬಂದಿದ್ದಾರೆ. ಇವರಿಗೆ ಸೂಕ್ತ ಚಿಕಿತ್ಸೆ ನೀಡಿದ್ದೇವೆ. ಇವರು ಸುಧಾರಿಸಿಕೊಳ್ಳುತ್ತಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಇವರು ಸುಧಾರಿಸಿಕೊಳ್ಳುತ್ತಾರೆ. ಇದಾದ ಬಳಿಕ ಇವರು ಮತ್ತೆ ಸಿನಿಮಾ ಶೂಟಿಂಗ್ ನಲ್ಲಿ ಭಾಗವಹಿಸಬಹುದು ” ಎಂದು ವೈದ್ಯರು ತಿಳಿಸಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
