fbpx
ಸಮಾಚಾರ

ಕರ್ನಾಟಕ ರಾಜ್ಯದ ಕುರಿತು ಒಂದು ಆಘಾತಕಾರಿ ಹೇಳಿಕೆ ನೀಡಿದ ಬ್ರಹ್ಮಾಂಡ ಗುರೂಜಿ! ಏನದು ಗೊತ್ತಾ?

ಇತ್ತೀಚಿನ ದಿನಗಳಲ್ಲಿ ಪ್ರಪಂಚದಲ್ಲಿ ಚಿತ್ರವಿಚಿತ್ರವಾದ ಘಟನೆಗಳು ನಡೆಯುತ್ತಿರುವುದನ್ನು ನಾವು ನೋಡಿದ್ದೇವೆ. ಕೋವಿಡ್ ನಂತಹ ಮಹಾಮಾರಿ ಇಂದ ಜನರು ಎಷ್ಟರಮಟ್ಟಿಗೆ ಕಷ್ಟ ಅನುಭವಿಸಿದ್ದಾರೆ ಎಂಬುದು ನಾವು ನೋಡಿದ್ದೇವೆ. ಇದಲ್ಲದೆ ಇತ್ತೀಚಿಗೆ ನಮ್ಮ ಕರ್ನಾಟಕ ರಾಜ್ಯದಲ್ಲೂ ಸಹ ಪ್ರವಾಹ, ಹೀಗೆ ಹಲವಾರು ಸಮಸ್ಯೆಗಳು ಕಾಡುತ್ತಿದೆ. ಹೀಗಾಗಿ ಕರ್ನಾಟಕದ ಭವಿಷ್ಯದ ಕುರಿತು ಒಂದು ಆಘಾತಕಾರಿ ಹೇಳಿಕೆಯನ್ನು ಬ್ರಹ್ಮಾಂಡ ಗುರೂಜಿ ನೀಡಿದ್ದಾರೆ.

ಬ್ರಹ್ಮಾಂಡ ಗುರೂಜಿ ಅವರು ಹಾಸನಾಂಬ ದೇವಿ ದರ್ಶನವನ್ನು ಪಡೆದಿದ್ದರು. ದರ್ಶನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗುರೂಜಿ ” ಕಲಿಯುಗ ಅಂತ್ಯ ಕಾಲಕ್ಕೆ ರೋಗ ರುಜಿನೆಗಳು ಜಾಸ್ತಿ ಆಗುತ್ತದೆ. ಡಿಸೆಂಬರ್ ಅಂತ್ಯಕ್ಕೆ ಐದು ಗ್ರಹಗಳು ಒಟ್ಟಿಗೆ ಬರುತ್ತದೆ, ಒಂಭತ್ತು ತಿಂಗಳು ಕೂರುತ್ತದೆ. ಎರಡು ಗ್ರಹಣಗಳು ಹತ್ತಿರ ಬರಬಾರದು. ಜನರಿಗೆ ನೀರಿನ ಅಭಾವ, ಬೆಂಕಿ, ಗಲಾಟೆ, ಘರ್ಷಣೆ, ಸ್ವಂತದವರ ಹತ್ತಿರ ಘರ್ಷಣೆಗಳಾಗುತ್ತವೆ. ರಾಜ್ಯದಲ್ಲಿ ಯಾರೂ ನೆಮ್ಮದಿಯಿಂದ ಇರಲು ಸಾಧ್ಯವಿಲ್ಲ. ದೇವರ ಸತ್ಯವಾಗಿ ಹೇಳುತ್ತೇನೆ, 31 ವರ್ಷದೊಳಗೆ ಕರ್ನಾಟಕ ಮೂರು ಭಾಗ ಆಗುತ್ತದೆ. ಮೂರು ಮುಖ್ಯಮಂತ್ರಿ, ಮೂವರು ವಿಶೇಷವಾಗಿ ರಾಜ್ಯಪಾಲರಾಗುತ್ತಾರೆ. ಶಿವನ ಮೇಲೆ ಆಣೆ ಮಾಡುತ್ತೇನೆ ಇದು ಸತ್ಯ ” ಎಂದು ಹೇಳಿದ್ದಾರೆ.

ಇಷ್ಟೇಅಲ್ಲದೆ ” ಹಾಸನಾಂಬೆ ಸನ್ನಿಧಿಯಲ್ಲಿ ಹೇಳುತ್ತಿದ್ದೇನೆ, ಭಾರತ ಎರಡು ದೇಶವಾಗುತ್ತದೆ. ಎರಡು ರಾಷ್ಟ್ರಪತಿ ಆಗುವುದು ಕೂಡ ಸತ್ಯ. 31 ವರ್ಷದಲ್ಲಿ ಹೀಗೆ ಆಗಬೇಕು ಅಂತ ನಾನು ಹೇಳಿದ್ದಲ್ಲ. ವೀರ ಬ್ರಮ್ಮಯ್ಯ, ಕೈವಾರ ತಾತಯ್ಯ, ಮಂಟೆ ಸ್ವಾಮಿಗಳು ಶಾಸನ ಬರೆದು ಇಟ್ಟಿದ್ದಾರೆ, ಇದು ನಡೆಯುವುದು ನಿಜ, ಸತ್ಯ” ಎಂದು ಹೇಳಿದ್ದಾರೆ. ಹೀಗಾಗಿ ಗುರೂಜಿ ಕರ್ನಾಟಕ ರಾಜ್ಯದ ಕುರಿತು ಆಘಾತಕಾರಿಯಾಗುವಂತಹ ಮಾತನ್ನು ಹೇಳಿದ್ದು, ಇದು ಪ್ರತಿಯೊಬ್ಬರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top