ಕನ್ನಡ ಸಿನಿಮಾಗಳು ಇತ್ತೀಚಿಗೆ ನಮ್ಮ ರಾಜ್ಯದಲ್ಲಿ ಮಾತ್ರವಲ್ಲದೆ ಬೇರೆ ರಾಜ್ಯಗಳಲ್ಲಿ ಮತ್ತು ವಿದೇಶದಲ್ಲೂ ಸಹ ಸಕತ್ ಸೌಂಡ್ ಮಾಡುತ್ತಿದೆ. ಕೆಜಿಎಫ್ ಸಿನಿಮಾದ ನಂತರ ಇದೀಗ ಹೆಚ್ಚು ಸೌಂಡ್ ಮಾಡುತ್ತಿರುವ ಕನ್ನಡದ ಸಿನಿಮಾ ಎಂದರೆ ಅದು ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಸಿನಿಮಾ. ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರಿಟಿಗಳು ಕೂಡ ಈ ಸಿನಿಮಾವನ್ನು ನೋಡಿ ಮೆಚ್ಚುಗೆಯನ್ನು ಸಹ ವ್ಯಕ್ತಪಡಿಸುತ್ತಿದ್ದಾರೆ.
ಕಾಂತಾರ ಸಿನಿಮಾ ಹೆಚ್ಚಾಗಿ ದೈವದ ಕಾನ್ಸೆಪ್ಟ್ ಮೇಲೆ ಮಾಡಲಾಗಿದೆ. ಇದರಲ್ಲಿ ರಿಷಬ್ ಶೆಟ್ಟಿ ದೈವದ ಪಾತ್ರದಲ್ಲಿ ಮಿಂಚಿದ್ದಾರೆ. ಹೀಗಾಗಿ ಇವರಿಗೆ ಅಭಿಮಾನಿಗಳು ಡಿವೈನ್ ಸ್ಟಾರ್ ಎಂಬ ಬಿರುದನ್ನು ಸಹ ನೀಡಿದ್ದಾರೆ. ಇವೆಲ್ಲ ಬೆಳವಣಿಗೆಗಳ ಮದ್ಯೆ ನಟ ಚೇತನ್ ಈ ಸಿನಿಮಾದ ಕುರಿತು ತಮ್ಮ ಅಭಿಪ್ರಾಯವನ್ನು ಹಚ್ಚಿಕೊಂಡಿದ್ದು, ಇದೀಗ ಈ ವಿಷಯ ಎಲ್ಲಾ ಕಡೆ ಬಹಳಷ್ಟು ಚರ್ಚೆಯಾಗುತ್ತಿದೆ.
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) October 18, 2022
ರಿಷಬ್ ಶೆಟ್ಟಿ ಕಾಂತಾರ ಸಿನಿಮಾದ ಬಗ್ಗೆ ಮಾತನಾಡುತ್ತಾ ” ಭೂತಕೋಲ, ದೈವಾರಾಧನೆ ಹಿಂದೂ ಸಂಸ್ಕೃತಿ ” ಎಂದು ಹೇಳಿದರು. ಇದೀಗ ನಟ ಚೇತನ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ರಿಷಬ್ ಹೇಳಿದ ಹಾಗೆ ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ ಎಂದು ಹೇಳುವ ಮೂಲಕ ಚರ್ಚೆ ಹುಟ್ಟುಹಾಕಿದ್ದಾರೆ. ‘ನಮ್ಮ ಕನ್ನಡದ ಕಾಂತಾರವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ. ನಮ್ಮ ಪಂಬದ/ ನಕಲಿ/ಪರವರ ಬಹುಜನ ಸಂಪ್ರದಾಯಗಳು ವೈದಿಕ ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲ ನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ’ ಎಂದು ಪೋಸ್ಟ್ ಹಾಕಿದ್ದಾರೆ. ಇದೀಗ ಈ ವಿಷಯ ಬಹಳಷ್ಟು ಚರ್ಚೆಯಾಗುತ್ತಿದ್ದು, ನೆಟ್ಟಿಗರು ಸಹ ಚೇತನ್ ಕುಮಾರ್ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ಚೇತನ್ ಕುಮಾರ್ ಈ ರೀತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿದ್ದಂತೆ ನೆಟ್ಟಿಗರು ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ‘ಎಲ್ಲೋ ಪರದೇಶದಲ್ಲಿ ಹುಟ್ಟಿರೋ ಬೆರೆಕೆ ನೀನು. ನಿನಗೇನು ಗೊತ್ತು ಕರಾವಳಿ ಸಂಸ್ಕೃತಿ ಬಗ್ಗೆ. ಎಲ್ಲದಕ್ಕು ನಂದೆಲ್ಲಿಡಲಿ ಅಂತ ಬರುತ್ತಿಯಾ ಚೆಡ್ಡಿ ಬಿಚ್ಚುಕೊಂಡು’ ಎಂದು ನೆಟ್ಟಿಗನೊಬ್ಬ ಕಾಮೆಂಟ್ ಮಾಡಿದ್ದಾನೆ. ‘ಮತ್ತೋರ್ವ ಕಾಮೆಂಟ್ ಮಾಡಿ ಎಲ್ಲೇ ಹೋದ್ರು ಆ ಧರ್ಮ ಈ ಧರ್ಮಅಂತಿಯೋಲ್ಲೋ’ ಎಂದು ಹೇಳಿದ್ದಾರೆ. ಇದೀಗ ಚೇತನ್ ಅವರ ಹೇಳಿಕೆ ಎಲ್ಲ ಕಡೆ ಬಹಳಷ್ಟು ಸದ್ದು ಮಾಡುತ್ತಿದ್ದು, ನೆಟ್ಟಿಗರು ಕೂಡ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
