ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಕುಟುಂಬ ಸಮೇತರಾಗಿ, ಕಾಂತಾರ ಚಿತ್ರ ತಂಡದ ಕಲಾವಿದರೊಂದಿಗೆ ಚಿತ್ರ ವೀಕ್ಷಿಸಿದರು. ಮಂಗಳೂರಿನ ಬಿಗ್ ಸಿನೆಮಾದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೊಂದಿಗೆ ಪತ್ನಿ ಹೇಮಾವತಿ ವಿ.ಹೆಗ್ಗಡೆ, ಕುಟುಂಬದ ಸದಸ್ಯರು ಕಾಂತಾರ ಚಿತ್ರ ವೀಕ್ಷಿಸಿದರು.
ಕಾಂತಾರ ಚಿತ್ರ ವೀಕ್ಷಿಸಿದ ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿದ್ರು. ಸಿನಿಮಾ ನೋಡದೇ ಬಹಳ ದಿನವಾಗಿತ್ತು. ಕಾಂತಾರದಲ್ಲಿ ದೈವಾರಾಧನೆಯನ್ನು ಬಹಳ ಚೆನ್ನಾಗಿ ರಿಷಬ್ ಶೆಟ್ಟಿ ತೋರಿಸಿದ್ದಾರೆ. ಚಿತ್ರದಲ್ಲಿ ಯುವಕರಿಗೆ ಹೊಸ ಕಥೆ ,ಹಳೆಯ ಸ್ಮರಣೆ ಆಗುತ್ತದೆ. ಈ ಚಿತ್ರದಲ್ಲಿ ಹೊಸ ದೃಷ್ಠಿಕೋನವಿದೆ. ಜಾತಿ ಮತ ಬೇಧ ಮರೆತು ಸಹಬಾಳ್ವೆ ಮಾಡಬೇಕೆಂಬ ಸಂದೇಶ ಈ ಚಿತ್ರದಲ್ಲಿದೆ. ಕಾಂತಾರ ಚಿತ್ರ ನೋಡಿ ಬಹಳ ಸಂತೋಷವಾಗಿದೆ ಎಂದರು.
ಚೇತನ್ ಹೇಳಿಕೆಗೆ ಹೆಗ್ಗಡೆ ಪ್ರತಿಕ್ರಿಯೆ:
‘ದೈವವು ಹಿಂದೂ ಧರ್ಮದ ಆಚರಣೆ ಅಲ್ಲ‘ ಎಂಬ ನಟ ಚೇತನ್ ಅವರ ಹೇಳಿಕೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಧರ್ಮದ ಭಾಗ ಹೌದೋ ಅಲ್ಲವೋ ನನಗೆ ಗೊತ್ತಿಲ್ಲ. ನಮ್ಮ ಜಿಲ್ಲೆಯ ಮೂಲಸ್ವಭಾವ ಅರಿಯದೇ ಮಾತನಾಡುವುದು ಸರಿಯಲ್ಲ. ಧರ್ಮದ ಮೂಲ ಎಲ್ಲಿಯೂ ಸಿಗುವುದಿಲ್ಲ. ನಂಬಿಕೆ, ಆಚರಣೆ ಸ್ವಾಭಾವಿಕವಾಗಿ ಬೆಳೆದು ಬಂದಿವೆ. ದೈವಾರಾಧನೆ ಮೇಲೆ ನಮ್ಮಗೆ ನಂಬಿಕೆ ಇದೆ. ಇದನ್ನು ಧರ್ಮದ ಜೊತೆ ತಳಕುಹಾಕಿ ವಿಮರ್ಶೆ ಮಾಡುವ ಅಗತ್ಯವಿಲ್ಲ’ ಎಂದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
