fbpx
ಸಮಾಚಾರ

ಕಾಂತಾರ ಸಿನಿಮಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಕೇರಳದ ಸಂಸ್ಥೆ! ಕಾರಣವೇನು ಗೊತ್ತಾ?

ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಸಿನಿಮಾ ಪ್ರಪಂಚಾದ್ಯಂತ ಸಕತ್ ಸೌಂಡ್ ಮಾಡುತ್ತಿದೆ. ಹೀಗಾಗಲೇ ಈ ಸಿನಿಮಾ ಬಾಕ್ಸ್ ಆಫೀಸ್ ಅನ್ನು ಧೂಳಿಪಟ ಮಾಡಿದೆ. ಆದರೆ ಇತ್ತೀಚಿಗೆ ಈ ಸಿನಿಮಾಕ್ಕೆ ಒಂದಾದರಮೇಲೊಂದರಂತೆ ತೊಂದರೆಗಳು ಎದುರಾಗುತ್ತಿದೆ.

ಕಾಂತಾರ ಸಿನಿಮಾದ ಒಂದು ಹಾಡಿನ ವಿರುದ್ಧ ಇದೀಗ ಕೇರಳದ ಜನಪ್ರಿಯ ಸಂಗೀತ ಬ್ಯಾಂಡ್ ‘ಥೈಕ್ಕುಡಂ ಬ್ರಿಡ್ಜ್’ ಆಕ್ಷೇಪಣೆ ಎತ್ತಿದ್ದು, ಕೃತಿಚೌರ್ಯದ ಆರೋಪ ಮಾಡಿ ಕಾನೂನು ಕ್ರಮ ಜರುಗಿಸಲು ಮುಂದಾಗಿದೆ. ಈ ಕುರಿತು ‘ಥೈಕ್ಕುಡಂ ಬ್ರಿಡ್ಜ್’ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

 

 

‘ತೈಕ್ಕುಡಂ ಬ್ರಿಡ್ಜ್‌’ಗೂ ‘ಕಾಂತಾರ’ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಇದನ್ನು ನಮ್ಮ ಕೇಳುಗರು ತಿಳಿದುಕೊಳ್ಳಬೇಕು. ನಮ್ಮ ‘ನವರಸಂ’ ಮತ್ತು ಕಾಂತಾರದ ‘ವರಾಹ ರೂಪಂ’ ಹಾಡಿನ ನಡುವೆ ಸ್ಪಷ್ಟ ಹೋಲಿಕೆಗಳು ಕಂಡು ಬಂದಿವೆ. ಆದ್ದರಿಂದ ಇದು ಹಕ್ಕುಸ್ವಾಮ್ಯ ಕಾನೂನುಗಳ ಉಲ್ಲಂಘನೆಯಾಗಿದೆ’ ಎಂದು ‘ಥೈಕ್ಕುಡಮ್ ಬ್ರಿಡ್ಜ್‌’ ತನ್ನ ಪೋಸ್ಟ್‌ನಲ್ಲಿ ಉಲ್ಲೇಖಿಸಿದೆ. ‘ನಮ್ಮ ದೃಷ್ಟಿಕೋದಲ್ಲಿ ‘ಸ್ಫೂರ್ತಿ’ ಮತ್ತು ‘ಚೌರ್ಯ’ ಎರಡೂ ವಿಭಿನ್ನ ಮತ್ತು ನಿರ್ವಿವಾದ. ಆದ್ದರಿಂದ ನಾವು ಇದಕ್ಕೆ ಕಾರಣವಾದ ತಂಡದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬಯಸುತ್ತೇವೆ’ ಎಂದು ಹೇಳಿದ್ದಾರೆ.

‘ಈ ವಿಷಯದಲ್ಲಿ ನಾವು ನಮ್ಮ ಕೇಳುಗರ ಬೆಂಬಲವನ್ನು ಅಪೇಕ್ಷಿಸುತ್ತೇವೆ. ಈ ಬಗ್ಗೆ ಪ್ರಚಾರ ಮಾಡಲು ನಿಮ್ಮನ್ನು ನಾವು ಕೋರುತ್ತೇವೆ. ಅಲ್ಲದೆ, ಸಂಗೀತದ ಹಕ್ಕುಸ್ವಾಮ್ಯವನ್ನು ರಕ್ಷಿಸುವ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಸಹ ಕಲಾವಿದರನ್ನು ನಾವು ವಿನಂತಿಸುತ್ತೇವೆ’ ಎಂದು ಪೋಸ್ಟ್ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top