ಕನ್ನಡ ರಾಜ್ಯೋತ್ಸವದಂದು (ನವೆಂಬರ್ 1) ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದರು. ಆದರೆ ಇದೀಗ ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಯಾರು ಕೊಡಲಿದ್ದಾರೆ ಎಂಬ ಪ್ರಶ್ನೆ ಎಲ್ಲಾ ಕಡೆ ಹರಿದಾಡುತ್ತಿದೆ.
ಹೀಗಾಗಲೇ ಅಪ್ಪುವಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಯಾರ ಕೈಯಲ್ಲಿ ಕೊಡಿಸಬೇಕೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಇವರ ಲಿಸ್ಟ್ ನಲ್ಲಿ ತಮಿಳು ನಟ ಸೂಪರ್ ಸ್ಟಾರ್ ರಜನಿಕಾಂತ್, ನಟಿ ಐಶ್ವರ್ಯ ರೈ ಮತ್ತು ದೀಪಿಕಾ ಪಡುಕೋಣೆ ಇದ್ದಾರೆ. ಈ ಮೂವರ ಪೈಕಿ ಮೊದಲ ಲಿಸ್ಟ್ ನಲ್ಲಿ ರಜನಿಕಾಂತ್ ಅವರ ಹೆಸರಿದೆ. ಒಂದು ವೇಳೆ ರಜನಿಕಾಂತ್ ಅವರಿಗೆ ಬರಲು ಸಾಧ್ಯವಾಗದೇ ಇದ್ದಾಗ ಐಶ್ವರ್ಯ ರೈ ಅಥವಾ ದೀಪಿಕಾ ಪಡುಕೋಣೆ ಅವರ ಕೈಯಲ್ಲಿ ಕೊಡಿಸುವುದಾಗಿ ತೀರ್ಮಾನಿಸಲಾಗುತ್ತದೆ.
ಅಪ್ಪು ಪರ್ವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬಸವರಾಜ್ ಬೊಮ್ಮಾಯಿ ಅವರು ನವೆಂಬರ್ 1 ರಂದು ವಿಧಾನಸೌಧದ ವಿಶಾಲ ಮೆಟ್ಟಿಲುಗಳ ಮೇಲೆ ಒಂದು ಭವ್ಯವಾದ ಕಾರ್ಯಕ್ರಮವನ್ನು ಆಯೋಜಿಸಿ ಅಲ್ಲಿ ಅಪ್ಪುವಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವುದಾಗಿ ಘೋಷಿಸಿದ್ದರು. ಈ ಕಾರ್ಯಕ್ರಮಕ್ಕೆ ಗಣ್ಯಾತಿಗಣ್ಯರಿಂದ ಹಿಡಿದು ಸಿನಿಮಾರಂಗದಲ್ಲಿ ಮಹತ್ವದ ಸಾಧನೆಯನ್ನು ಮಾಡಿದವರು ಸಹ ಭಾಗವಹಿಸಲಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
