ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 2020ರ ಆ. 5ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ಮಾಡಿದ್ದರು. ಇದಾದ ನಂತರ ಅಯೋಧ್ಯೆಯ ರಾಮ ಮಂದಿರದ ದರ್ಶನ ಯಾವಾಗ ಎಂಬ ಪ್ರಶ್ನೆ ಭಕ್ತಾದಿಗಳ ಮನಸಲ್ಲಿ ಇತ್ತು. ಇದೀಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ.
ಇದೀಗ ಬಂದಿರುವ ಸುದ್ದಿಯ ಪ್ರಕಾರ 2024ರ ಜನವರಿಯಿಂದ ಭಕ್ತಾದಿಗಳಿಗೆ ಅಯೋಧ್ಯೆಯಲ್ಲಿನ ಭವ್ಯವಾದ ರಾಮ ಮಂದಿರದ ಪಡೆಯಲು ಅವಕಾಶ ಸಿಗಲಿದೆ. ಈ ಕುರಿತು ಸ್ವತಃ ನಿರ್ಮಾಣದ ಮೇಲ್ವಿಚಾರಣೆಗಾಗಿ ಸ್ಥಾಪಿಸಲಾದ ಟ್ರಸ್ಟ್ನ ಪ್ರಮುಖ ಸದಸ್ಯರೊಬ್ಬರು ತಿಳಿಸಿದ್ದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶೇ. 50ರಷ್ಟು ದೇಗುಲ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಮಕರ ಸಂಕ್ರಾಂತಿ ಹಬ್ಬದಂದು ದೇಗುಲದ ಗರ್ಭಗುಡಿಯಲ್ಲಿ ರಾಮಲಲ್ಲಾನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ 2024ರ ಜನವರಿಯಲ್ಲಿ ದೇವಾಲಯಗಳನ್ನು ಭಕ್ತರಿಗೆ ತೆರೆಯಲಾಗುವುದು ಎಂದು ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ತಿಳಿಸಿದರು. ಇದಲ್ಲದೆ 2024ರ ಜನವರಿ 14ರ ಸುಮಾರಿಗೆ ರಾಮನ ವಿಗ್ರಹ ಪ್ರತಿಷ್ಠಾಪಿಸಲು ನಿರ್ಧರಿಸಿದ್ದು, ಇದಕ್ಕಾಗಿ ಅಂದಾಜು 1,800 ಕೋಟಿ ರೂ. ಖರ್ಚಾಗಲಿದೆ ಎಂದು ತಿಳಿಸಿದ್ದರು.
‘ಅಯೋಧ್ಯೆಯ ರಾಮಮಂದಿರ ನಿರ್ಮಾಣ ಪೂರ್ಣಗೊಂಡಾಗ ಅದು ಅದ್ಭುತ ವಾಸ್ತುಶಿಲ್ಪ, ಕರಕುಶಲತೆ ಹಾಗೂ ಅತ್ಯುನ್ನತ ಎಂಜಿನಿಯರಿಂಗ್ ಸಂಕೇತ ಎನಿಸಿಕೊಳ್ಳಲಿದೆ. ನಿಗದಿ ಪಡಿಸಿದಂತೆ 2023ರ ಡಿಸೆಂಬರ್ ವೇಳೆಗೆ ಗರ್ಭಗೃಹ ನಿರ್ಮಾಣ ಪೂರ್ಣಗೊಳ್ಳುವ ನಿಟ್ಟಿನಲ್ಲಿ ಭರದಿಂದ ಕಾಮಗಾರಿ ನಡೆಸುತ್ತಿದ್ದೇವೆ. ಗರ್ಭಗೃಹ ನಿರ್ಮಾಣದ ಬಳಿಕ ರಾಮಲಲ್ಲಾ ವಿಗ್ರಹವನ್ನು ಇಲ್ಲಿ ಪ್ರತಿಷ್ಠಾಪನೆ ಮಾಡಿ ಪ್ರಾಣ ಪ್ರತಿಷ್ಠೆ ಪೂಜೆ ನೆರವೇರಿಸಲಾಗುವುದು. ಇದರ ಬಳಿಕ ದೂರದಿಂದಲೇ ದೇವರ ದರ್ಶನಕ್ಕೆ ಜನರಿಗೆ ಅವಕಾಶ ನೀಡಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
