fbpx
ಸಮಾಚಾರ

ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಿದ್ದಾರೆ ದಕ್ಷಿಣ ಭಾರತದ ಇಬ್ಬರು ಸ್ಟಾರ್ ನಟರು! ಸಿಎಂ ಘೋಷಣೆ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನವೆಂಬರ್ 1 ರಂದು ಅವರು ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದರು. ಆದರೆ ಅಪ್ಪು ಗೆ ಈ ಪ್ರಶಸ್ತಿಯನ್ನು ಯಾರು ನೀಡಲಿದ್ದಾರೆ ಎಂಬುದರ ಕುರಿತು ಇವರು ಯಾವುದೇ ಸ್ಪಷ್ಟನೆಯನ್ನು ನೀಡಿದರಲಿಲ್ಲ. ಆದರೆ ಇದೀಗ ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಯಾರು ನೀಡಲಿದ್ದಾರೆ ಎಂದು ಮುಖ್ಯಮಂತ್ರಿಯವರು ಘೋಷಿಸಿದ್ದಾರೆ.

ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲು ದಕ್ಷಿಣ ಭಾರತದ ಸ್ಟಾರ್ ನಟರು ಬರಲಿದ್ದಾರೆ ಎಂದು ಮುಖ್ಯಮಂತ್ರಿಯವರು ತಿಳಿಸಿದ್ದರು. ಆದರೆ ಅವರ ಹೆಸರನ್ನು ಮಾತ್ರ ತಿಳಿಸಿರಲಿಲ್ಲ. ಆದರೆ ಇದೀಗ ಇಬ್ಬರು ಸ್ಟಾರ್ ನಟರು ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಿದ್ದಾರೆ. ಒಪ್ಪರು ಒಪ್ಪಿದ್ದಾರೆ ಮತ್ತು ಇನ್ನೊಬ್ಬರು ಉತ್ತರಿಸಬೇಕು ಎಂದು ಹೇಳಿದ್ದಾರೆ.

ದಕ್ಷಿಣ ಭಾರತದ ಸ್ಟಾರ್ ನಟರಾಗಿರುವ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ಅವರಿಗೆ ಕರ್ನಾಟಕ ಸರಕಾರವು ಆಹ್ವಾನ ನೀಡಿದ್ದು, ಜ್ಯೂನಿಯರ್ ಎನ್.ಟಿ.ಆರ್ ಕಾರ್ಯಕ್ರಮಕ್ಕೆ ಬರಲು ಒಪ್ಪಿಕೊಂಡಿದ್ದು, ರಜನಿಕಾಂತ್ ಅವರ ಒಪ್ಪಿಗೆ ಪತ್ರ ಇನ್ನಷ್ಟೇ ಸಿಗಬೇಕಿದೆ. ಈ ಕಾರ್ಯಕ್ರಮ ನವೆಂಬರ್ 1 ರಂದು ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯಲಿದ್ದು, ಅಭಿಮಾನಿಗಳು ಮತ್ತು ರಾಜ್ ಕುಮಾರ್ ಕುಟುಂಬದವರು ಭಾಗಿಯಾಗಲಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top