fbpx
ಸಮಾಚಾರ

ಸೈದ್ಧಾಂತಿಕ ಭಿನ್ನಾಭಿಪ್ರಾಯ ಇದ್ದರೂ ಹಂಸಲೇಖಾ ಬರೆದ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು” ಹಾಡಿಗೆ ಕುಣಿದು ಕುಪ್ಪಳಿಸಿದ ಸಿಟಿ ರವಿ

ಕನ್ನಡ ಚಿತ್ರರಂಗದ ದೈತ್ಯ ದೇಸಿಪ್ರತಿಭೆ ನಾದಬ್ರಹ್ಮ ಹಂಸಲೇಖ ಅವರು ದಲಿತರ ಮೇಲೆ ನಡೆಯುತ್ತಿರುವ ಅಸ್ಪೃಶ್ಯತೆ, ಸಮಾಜದಲ್ಲಿನ ಜಾತಿದೋರಣೆಗಳ ವಿಚಾರವಾಗಿ ಐದಾರು ತಿಂಗಳ ಹಿಂದೆ ನೀಡಿದ್ದ ಹೇಳಿಕೆ ಸಮಾಜದಲ್ಲಿ ಸಂಚಲವನ್ನೇ ಸೃಷ್ಟಿಸಿತ್ತು. ಈ ವಿಚಾರವಾಗಿ ಬಿಜೆಪಿಯ ಬಹುತೇಕರು ನಾದಬ್ರಹ್ಮನ ವಿರುದ್ಧ ತಿರುಗಿಬಿದ್ದಿದ್ದರು. ಟೀಕೆ ಟಿಪ್ಪಣಿಗಳನ್ನ ಮಾಡಿದ್ದರು. ಈ ವಿಚಾರ ಈಗ ಏಕೆ ಅಂತೀರಾ? ಮುಂದೆ ಓದಿ

 

 

ಸೈದ್ದಂತಿಕ ಭಿನ್ನಾಭಿಪ್ರಾಯ ಇದ್ದರೂ ಹಂಸಲೇಖಾ ಬರೆದ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು” ಹಾಡಿಗೆ ಬಿಜೆಪಿ ನಾಯಕ ಸಿಟಿ ರವಿ ಕುಣಿದು ಕುಪ್ಪಳಿಸಿದ್ದಾರೆ. 67ನೇ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಚಿಕ್ಕಮಗಳೂರು ಜಿಲ್ಲೆಯ ಸುಭಾಷ್ ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ಇಂದು ಏರ್ಪಡಿಸಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಸಿಟಿ ರವಿ ಭರ್ಜರಿ ಸ್ಟೆಪ್ ಹಾಕಿದ್ದಾರೆ. ನಾದಬ್ರಹ್ಮ ಹಂಸಲೇಖಾ ಅವರು ಬರೆದು ಅವರೇ ಸಂಗೀತ ಸಂಯೋಜನೆಯನ್ನೂ ಮಾಡಿರುವ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡಿಗೆ ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ಕುಣಿದರು.

ಉಳಿದಂತೆ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ `ಜಯ ಭಾರತ ಜನನಿಯ ತನುಜಾತೆ’, `ಬಾರಿಸು ಕನ್ನಡ ಡಿಂಡಿಮವ’, ಹುಯಿಲಗೋಳ ನಾರಾಯಣರ ರಚನೆಯ `ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’, ಡಾ.ಡಿ.ಎಸ್ ಕರ್ಕಿ ಅವರ `ಹಚ್ಚೇವು ಕನ್ನಡದ ದೀಪ’, ಚನ್ನವೀರಕಣವಿ ಬರೆದಿರುವ `ವಿಶ್ವ ವಿನೂತನ ವಿದ್ಯಾ ಚೇತನ’ ಗೀತೆಗಳನ್ನು ಸಾಮೂಹಿಕವಾಗಿ ಹಾಡಲಾಯಿತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top