ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಕಾನ್ಸ್ಟೇಬಲ್ಗಳ ನೇಮಕಕ್ಕೆ ನಡೆಸಲಿರುವ ಪರೀಕ್ಷೆ ಯನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ನಡೆಸುತ್ತಿರುವುದು ಸಹಜವಾಗಿ ಕನ್ನಡಿಗರನ್ನು ಕೆರಳಿಸಿದೆ. ಎಸ್ಎಸ್ಸಿ ನಡೆಸುವ ಪರೀಕ್ಷೆಯಲ್ಲಿ ಹಿಂದಿ ಮತ್ತು ಇಂಗ್ಲಿಷ್ ಮಾತ್ರ ಕಡ್ಡಾಯಗೊಳಿಸಿರುವುದಕ್ಕೆ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು ಎಸ್ಎಸ್ಸಿ ಧೋರಣೆಯಿಂದ ಕನ್ನಡಿಗರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಈ ವಿಚಾರವಾಗಿ ಸಂಸದ ಜಿಸಿ ಚಂದ್ರಶೇಖರ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಚಂದ್ರಶೇಖರ್ ಅವರು “ಸರ್ಕಾರ 24369 ಕಾನ್ಸ್ಟೇಬಲ್ ಹುದ್ದೆಗಳಿಗೆ ನಡೆಸುತ್ತಿರುವ SSC ಪರೀಕ್ಷೆ ಕೇವಲ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಬರೆಯಲು ಅವಕಾಶವಿದೆ. ಇದು ಕನ್ನಡ ಮಾಧ್ಯಮದಲ್ಲಿ SSLC ಓದಿರುವ ನಮ್ಮ ಕನ್ನಡ ಮಕ್ಕಳಿಗೆ ಮಾಡಿರುವ ಅನ್ಯಾಯ ಅಲ್ಲವೇ. ಇಷ್ಟಾದರೂ ನಮ್ಮಮುಖ್ಯಮಂತ್ರಿಗಳು ಸುಮ್ಮನಿರುವುದು ಆಶ್ಚರ್ಯಕರವಾಗಿದೆ” ಎಂದು ಬರೆದುಕೊಂಡಿದ್ದಾರೆ.
ಸರ್ಕಾರ 24369 ಕಾನ್ಸ್ಟೇಬಲ್ ಹುದ್ದೆಗಳಿಗೆ ನಡೆಸುತ್ತಿರುವ SSC ಪರೀಕ್ಷೆ ಕೇವಲ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಬರೆಯಲು ಅವಕಾಶವಿದೆ. ಇದು ಕನ್ನಡ ಮಾಧ್ಯಮದಲ್ಲಿ SSLC ಓದಿರುವ ನಮ್ಮ ಕನ್ನಡ ಮಕ್ಕಳಿಗೆ ಮಾಡಿರುವ ಅನ್ಯಾಯ ಅಲ್ಲವೇ. ಇಷ್ಟಾದರೂ ನಮ್ಮ @CMofKarnataka ಸುಮ್ಮನಿರುವುದು ಆಶ್ಚರ್ಯಕರವಾಗಿದೆ pic.twitter.com/KRJZMQiT7H
— GC ChandraShekhar (@GCC_MP) October 30, 2022
ಏನಿದು ವಿವಾದ?
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದ ಮೂಲಕ 2023ರ ಜನವರಿಯಲ್ಲಿ ನಡೆಯಲಿರುವ 24,369 ಸಿಎಪಿಎಫ್ಎಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ 10ನೇ ತರಗತಿಯ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ನ.30 ಕೊನೆಯ ದಿನ. ಆದರೆ, ಕನ್ನಡ ಸೇರಿದಂತೆ ಯಾವುದೇ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ನೀಡಿಲ್ಲ. ಕೇವಲ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
